ಉಡುಪಿ: ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು ಸರ್ಕಾರ ಕೂಡಲೇ ಬಾಕಿ ಇರುವ ವೇತನವನ್ನು ತಕ್ಷಣ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.
ತುರ್ತು ಸಂದರ್ಭದಲ್ಲಿ ರೋಗಿಗಳ ಪಾಲಿನ ಜೀವರಕ್ಷಕರಾಗಿ ಹಗಲಿರುಳು ಸೇವೆ ಸಲ್ಲಿಸುವ 108 ಸೇವೆಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಂಬಳ ಭಾಗ್ಯವನ್ನೇ ನೀಡಿಲ್ಲ.
ಸದಾ ಗ್ಯಾರಂಟಿಗಳ ನೆಪದಲ್ಲಿ ರಾಜ್ಯ ಸರ್ಕಾರ ದೈನಂದಿನ ಅಗತ್ಯ ಸೇವೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು 108 ಸೇವಾ ಸಿಬ್ಬಂದಿಗಳ ಮುಷ್ಕರದಿಂದ ರಾಜ್ಯದ ರೋಗಿಗಳು ತುರ್ತು ಸೇವೆಯಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ.
ಸರ್ಕಾರ ತಕ್ಷಣ ಸಿಬ್ಬಂದಿಗಳ ವೇತನವನ್ನು ತಕ್ಷಣ ಪಾವತಿಸಿ ನ್ಯಾಯ ಬದ್ಧವಾದ ಬೇಡಿಕೆಯನ್ನು ಪರಿಗಣಿಸಿ ಮುಷ್ಕರ ಹಿಂಪಡೆಯುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಈ ಬಂದ್ ನಿಂದಾಗಿ ಸಂಭವಿಸುವ ಎಲ್ಲಾ ಅನಾನುಕೂಲತೆ ಹಾಗೂ ಸಮಸ್ಯೆಗಳಿಗೆ ಸರಕಾರವೇ ಹೊಣೆಯಾಗಲಿದ್ದು ಸರ್ಕಾರ ಕೂಡಲೇ ರಾಜ್ಯದ ಜನರ ಆರೋಗ್ಯ ಸೇವೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…