Featured

ಉಡುಪಿ:  3 ತಿಂಗಳಿನಿಂದ ಬಾಕಿ ಇರುವ 108 ಸೇವೆ ಸಿಬ್ಬಂದಿಗಳ ವೇತನ ತಕ್ಷಣ ಪಾವತಿ ಮಾಡಿ : ಯಶ್ಪಾಲ್ ಸುವರ್ಣ ಆಗ್ರಹ – Vishwanews24

ಉಡುಪಿ:  3 ತಿಂಗಳಿನಿಂದ ಬಾಕಿ ಇರುವ 108 ಸೇವೆ ಸಿಬ್ಬಂದಿಗಳ ವೇತನ ತಕ್ಷಣ ಪಾವತಿ ಮಾಡಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು ಸರ್ಕಾರ ಕೂಡಲೇ ಬಾಕಿ ಇರುವ ವೇತನವನ್ನು ತಕ್ಷಣ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.

ತುರ್ತು ಸಂದರ್ಭದಲ್ಲಿ ರೋಗಿಗಳ ಪಾಲಿನ ಜೀವರಕ್ಷಕರಾಗಿ ಹಗಲಿರುಳು ಸೇವೆ ಸಲ್ಲಿಸುವ 108 ಸೇವೆಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಂಬಳ ಭಾಗ್ಯವನ್ನೇ ನೀಡಿಲ್ಲ.

ಸದಾ ಗ್ಯಾರಂಟಿಗಳ ನೆಪದಲ್ಲಿ ರಾಜ್ಯ ಸರ್ಕಾರ ದೈನಂದಿನ ಅಗತ್ಯ ಸೇವೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು 108 ಸೇವಾ ಸಿಬ್ಬಂದಿಗಳ ಮುಷ್ಕರದಿಂದ ರಾಜ್ಯದ ರೋಗಿಗಳು ತುರ್ತು ಸೇವೆಯಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ.

ಸರ್ಕಾರ ತಕ್ಷಣ ಸಿಬ್ಬಂದಿಗಳ ವೇತನವನ್ನು ತಕ್ಷಣ ಪಾವತಿಸಿ ನ್ಯಾಯ ಬದ್ಧವಾದ ಬೇಡಿಕೆಯನ್ನು ಪರಿಗಣಿಸಿ ಮುಷ್ಕರ ಹಿಂಪಡೆಯುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಈ ಬಂದ್ ನಿಂದಾಗಿ ಸಂಭವಿಸುವ ಎಲ್ಲಾ ಅನಾನುಕೂಲತೆ ಹಾಗೂ ಸಮಸ್ಯೆಗಳಿಗೆ ಸರಕಾರವೇ ಹೊಣೆಯಾಗಲಿದ್ದು ಸರ್ಕಾರ ಕೂಡಲೇ ರಾಜ್ಯದ ಜನರ ಆರೋಗ್ಯ ಸೇವೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

6 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

7 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago