Featured

ಉಡುಪಿ :  3-4 ದಿನದೊಳಗೆ ಮರಳು, ಲಾರಿ ಮಾಲಕರ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಡಿಸಿ ಕಚೇರಿ ಎದುರು ಧರಣಿ: ಕೋಟ ಎಚ್ಚರಿಕೆ- Vishwanews24

ಉಡುಪಿ :  3-4 ದಿನದೊಳಗೆ ಮರಳು, ಲಾರಿ ಮಾಲಕರ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಡಿಸಿ ಕಚೇರಿ ಎದುರು ಧರಣಿ: ಕೋಟ ಎಚ್ಚರಿಕೆ

ಉಡುಪಿ: ಇನ್ನು 3-4 ದಿನದೊಳಗೆ ಜಿಲ್ಲೆಯ ಜನತೆ ಎದುರಿಸುತ್ತಿರುವ ಮರಳು ಸಮಸ್ಯೆ ಹಾಗೂ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಎದುರಿಸುತ್ತಿರುವ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ತಾನೂ ಸೇರಿದಂತೆ ಐದು ಮಂದಿ ಚುನಾಯಿತ ಶಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಕಿರಣ್‌ ಕುಮಾರ್ ಕೊಡ್ಗಿ ಹಾಗೂ ಗುರುರಾಜ ಗಂಟಿಹೊಳೆ ಇವರ ಉಪಸ್ಥಿತಿಯಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಸರಕಾರದ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ ಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇರ ಹೊಣೆ ಎಂದರು.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದೆ. ಮರಳು ಸಿಗುತ್ತಿಲ್ಲ. ಕೆಂಪು ಕಲ್ಲು, ಕೆಂಪು ಮಣ್ಣು, ಶಿಲೆ ಕಲ್ಲು, ಜಲ್ಲಿ, ಕಬ್ಬಿಣ ಸೇರಿದಂತೆ ಇತರ ಕಟ್ಟಡ ಸಾಮಗ್ರಿಗಳ ಸಾಗಾಟಕ್ಕೆ ಪೊಲೀಸರು ತಡೆಯೊಡ್ಡಿ ಕೇಸು ಹಾಕುತಿದ್ದಾರೆ. ದಂಡ ವಿಧಿಸುತಿ ದ್ದಾರೆ. ಇದರಿಂದ ಲಾರಿ, ಟೆಂಪೋ ಮಾಲಕರು ಮುಷ್ಕರ ಆರಂಭಿಸಿದ್ದಾರೆ ಎಂದು ಅವರು ವಿವರಿಸಿದರು.

ಇದರಿಂದ ಜಿಲ್ಲೆಯಲ್ಲಿ ನಿರ್ಮಾಣ ವಲಯ ಅತೀವ ತೊಂದರೆಯನ್ನು ಎದುರಿಸುತ್ತಿದೆ. ರೈತರಿಗೂ ತನ್ನ ಜಾಗದ ಮಣ್ಣು, ಕಲ್ಲು ಸಾಗಿಸುವುದು ಸಮಸ್ಯೆಯಾಗುತ್ತಿದೆ ಎಂದ ಅವರು, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಸಮಸ್ಯೆಯ ಗಂಭೀರತೆಯನ್ನು ಅರಿತು ಮಧ್ಯ ಪ್ರವೇಶಿಸಿ ತಕ್ಷಣ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಜಿಲ್ಲೆಯ ಐವರು ಶಾಸಕರೊಂದಿಗೆ ತಾನು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂರಲಿದ್ದೇವೆ ಎಂದವರು ಎಚ್ಚರಿಕೆ ನೀಡಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago