ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು – Vishwanews24

Featured, ಉಡುಪಿ

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು

ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.

ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು ದೇವಸ್ಥಾನಕ್ಕೆ ಮಧ್ಯಾಹ್ನ ಆಗಮಿಸಿದ್ದರು. ಏತನ್ಮಧ್ಯೆ ದೇವಸ್ಥಾನದ ಬಾವಿಯೊಳಗೆ ಬೆಕ್ಕೊಂದು ಬಿದ್ದಿರುವುದಾಗಿ ದೇವಸ್ಥಾನದ ಸಿಬಂದಿ ಹೇಳಿದರು.

ಸ್ವಾಮೀಜಿ ತಕ್ಷಣ ಬಾವಿಯತ್ತ ತೆರಳಿ ಬಕೆಟ್‌ ಇಳಿಸಿ ಬೆಕ್ಕನ್ನುಬಕೆಟ್‌ ಒಳಗೆ ಬರುವಂತೆ ಪ್ರಯತ್ನಿಸಿದರು. ಅದು ಫ‌ಲಕಾರಿಯಾಗದಿದ್ದಾಗ, ಉಟ್ಟ ಖಾವಿಶಾಟಿಯನ್ನು ಸೊಂಟಕ್ಕೆ ಬಿಗಿಯಾಗಿ ಸುತ್ತಿ ಸುಮಾರು ಐದಡಿ ವ್ಯಾಸದ ಬಾವಿಗೆ ಹಗ್ಗದ ಸಹಾಯದಿಂದ ಇಳಿದರು. ಬೆಕ್ಕು ಹಿಡಿದು ಬಕೆಟ್ ನಲ್ಲಿ ಇರಿಸಿದರೂ ಹೆದರಿ ಹೊರಕ್ಕೆ ಹಾರಿ ಇನ್ನೊಂದು ಬಾವಿಯ ಇನ್ನೊಂದು ಅಂತಸ್ತಿನಲ್ಲಿ ಕುಳಿತುಕೊಂಡಿತು. ಬಳಿಕ ಬೆಕ್ಕನ್ನು ಕೈಯಲ್ಲಿ ಹಿಡಿದು ಒಂದೊಂದೆ ಅಂತಸ್ತನ್ನು ಏರಿ ಮೇಲೆ   ಬೆಕ್ಕನ್ನು ರಕ್ಷಿಸಿದರು.

ಕಾಪು: ಅಪಾರ್ಟ್‌ಮೆಂಟ್ ಕಂಪೌಂಡ್ ಕುಸಿತ – ರಿಕ್ಷಾ, ಬೈಕ್‌ಗಳಿಗೆ ಹಾನಿ – Vishwanews24

 

Leave a Reply