ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.
ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು ದೇವಸ್ಥಾನಕ್ಕೆ ಮಧ್ಯಾಹ್ನ ಆಗಮಿಸಿದ್ದರು. ಏತನ್ಮಧ್ಯೆ ದೇವಸ್ಥಾನದ ಬಾವಿಯೊಳಗೆ ಬೆಕ್ಕೊಂದು ಬಿದ್ದಿರುವುದಾಗಿ ದೇವಸ್ಥಾನದ ಸಿಬಂದಿ ಹೇಳಿದರು.
ಸ್ವಾಮೀಜಿ ತಕ್ಷಣ ಬಾವಿಯತ್ತ ತೆರಳಿ ಬಕೆಟ್ ಇಳಿಸಿ ಬೆಕ್ಕನ್ನುಬಕೆಟ್ ಒಳಗೆ ಬರುವಂತೆ ಪ್ರಯತ್ನಿಸಿದರು. ಅದು ಫಲಕಾರಿಯಾಗದಿದ್ದಾಗ, ಉಟ್ಟ ಖಾವಿಶಾಟಿಯನ್ನು ಸೊಂಟಕ್ಕೆ ಬಿಗಿಯಾಗಿ ಸುತ್ತಿ ಸುಮಾರು ಐದಡಿ ವ್ಯಾಸದ ಬಾವಿಗೆ ಹಗ್ಗದ ಸಹಾಯದಿಂದ ಇಳಿದರು. ಬೆಕ್ಕು ಹಿಡಿದು ಬಕೆಟ್ ನಲ್ಲಿ ಇರಿಸಿದರೂ ಹೆದರಿ ಹೊರಕ್ಕೆ ಹಾರಿ ಇನ್ನೊಂದು ಬಾವಿಯ ಇನ್ನೊಂದು ಅಂತಸ್ತಿನಲ್ಲಿ ಕುಳಿತುಕೊಂಡಿತು. ಬಳಿಕ ಬೆಕ್ಕನ್ನು ಕೈಯಲ್ಲಿ ಹಿಡಿದು ಒಂದೊಂದೆ ಅಂತಸ್ತನ್ನು ಏರಿ ಮೇಲೆ ಬೆಕ್ಕನ್ನು ರಕ್ಷಿಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…