ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.
ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು ದೇವಸ್ಥಾನಕ್ಕೆ ಮಧ್ಯಾಹ್ನ ಆಗಮಿಸಿದ್ದರು. ಏತನ್ಮಧ್ಯೆ ದೇವಸ್ಥಾನದ ಬಾವಿಯೊಳಗೆ ಬೆಕ್ಕೊಂದು ಬಿದ್ದಿರುವುದಾಗಿ ದೇವಸ್ಥಾನದ ಸಿಬಂದಿ ಹೇಳಿದರು.
ಸ್ವಾಮೀಜಿ ತಕ್ಷಣ ಬಾವಿಯತ್ತ ತೆರಳಿ ಬಕೆಟ್ ಇಳಿಸಿ ಬೆಕ್ಕನ್ನುಬಕೆಟ್ ಒಳಗೆ ಬರುವಂತೆ ಪ್ರಯತ್ನಿಸಿದರು. ಅದು ಫಲಕಾರಿಯಾಗದಿದ್ದಾಗ, ಉಟ್ಟ ಖಾವಿಶಾಟಿಯನ್ನು ಸೊಂಟಕ್ಕೆ ಬಿಗಿಯಾಗಿ ಸುತ್ತಿ ಸುಮಾರು ಐದಡಿ ವ್ಯಾಸದ ಬಾವಿಗೆ ಹಗ್ಗದ ಸಹಾಯದಿಂದ ಇಳಿದರು. ಬೆಕ್ಕು ಹಿಡಿದು ಬಕೆಟ್ ನಲ್ಲಿ ಇರಿಸಿದರೂ ಹೆದರಿ ಹೊರಕ್ಕೆ ಹಾರಿ ಇನ್ನೊಂದು ಬಾವಿಯ ಇನ್ನೊಂದು ಅಂತಸ್ತಿನಲ್ಲಿ ಕುಳಿತುಕೊಂಡಿತು. ಬಳಿಕ ಬೆಕ್ಕನ್ನು ಕೈಯಲ್ಲಿ ಹಿಡಿದು ಒಂದೊಂದೆ ಅಂತಸ್ತನ್ನು ಏರಿ ಮೇಲೆ ಬೆಕ್ಕನ್ನು ರಕ್ಷಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…