Featured

ಉಡುಪಿ :40 ಪರ್ಸೆಂಟ್ ಕಮಿಷನ್ ಗೂ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇಲ್ಲ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ – Vishwanews24

ಉಡುಪಿ :40 ಪರ್ಸೆಂಟ್ ಕಮಿಷನ್ ಗೂ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇರುವುದಿಲ್ಲ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಉಡುಪಿ : ರಾಜ್ಯದಲ್ಲಿ ಇತ್ತೀಚಿಗೆ ಸುದ್ದಿ ಆಗುತ್ತಿರುವ 40 ಪರ್ಸೆಂಟ್ ಕಮಿಷನ್ ಗೂ ಉಡುಪಿ ಜಿಲ್ಲೆಯ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಗುತ್ತಿಗೆದಾರರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಇತ್ತೀಚಿಗೆ ರಾಜ್ಯದಲ್ಲಿ ಸರಕಾರಿ ಕಾಮಗಾರಿಗಳಿಗೆ ಗುತ್ತಿಗೆದಾರರು ಸರಕಾರಕ್ಕೆ, ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ 40 ಶೇ. ಕಮಿಷನ್ ಹಣ ನೀಡುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಆದರೆ ಕಾಮಗಾರಿಗಾಗಿ ಈ ಹಿಂದಿನ ಸರಕಾರದ ಅವಧಿಯಲ್ಲಿ ಅಥವಾ ಈಗಿನ ಹಾಲಿ ಸರಕಾರದ ಅವಧಿಯಲ್ಲಿ ಕಮಿಷನ್ ನೀಡಿರುವ ಉದಾಹರಣೆ ಇರುವುದಿಲ್ಲ. ರಾಜ್ಯದಲ್ಲಿ ಇತ್ತೀಚಿಗೆ ಸುದ್ದಿ ಆಗುತ್ತಿರುವ 40% ಕಮಿಷನ್ ಗೂ ಉಡುಪಿ ಜಿಲ್ಲೆಯ ಗುತ್ತಿಗೆದಾರರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ನಮಗೆ ಈ ರೀತಿಯಾದಂತಹ ವಾತಾವರಣ ಕಂಡು ಬಂದಿರುವುದಿಲ್ಲ. ನಾವು ಪಿಡಬ್ಲ್ಯೂಡಿ ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ, ಬಂದರು ಇತ್ಯಾದಿ ಸರಕಾರಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ. ಈ ಕಾಮಗಾರಿಗಳನ್ನು ಟೆಂಡರ್ ಮುಖಾಂತರ ಪಡೆದು ಪಾರದರ್ಶಕವಾಗಿ ಗುಣಮಟ್ಟದ ಕಾಮಗಾರಿಗಳನ್ನು ನಡೆಸಿರುತ್ತೇವೆ. ಆದರೆ ನಾವು ಜಿಲ್ಲೆಯ ಯಾವುದೇ ಜನಪ್ರತಿನಿಧಿಗಳಿಗೆ ಕಮಿಷನ್ ಹಣವನ್ನು ನೀಡಿರುವುದಿಲ್ಲ ಎಂದು ಹೇಳಿದ್ದಾರೆ.

ಬೇರೆ ಕಡೆ ಆಗುತ್ತಿರುವ ಸಮಸ್ಯೆ ಬಗ್ಗೆ ನಾವು ಮಾತನಾಡುವುದಿಲ್ಲ ಆದರೆ ನಮ್ಮ ಜಿಲ್ಲೆಯಲ್ಲಿ 40 ಶೇ. ಕಮಿಷನ್ ನ ಸಮಸ್ಯೆ ಇಲ್ಲ. ಜನಪ್ರತಿನಿಧಿಗಳು ಹಾಗೂ ಗುತ್ತಿಗೆದಾರರು ಒಂದೇ ನಾಣ್ಯದ ಎರಡು ಮುಖಗಳಂತೆ ಒಟ್ಟಿಗೆ ಕೆಲಸ ಮಾಡಿದರೆ ಜಿಲ್ಲೆ ಅಭಿವೃದ್ಧಿಯಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ಹೊರತಾಗಿಯೂ ಕೆಲವು ಸಣ್ಣ ಗುತ್ತಿಗೆದಾರರಿಗೆ ಹಣ ಪಾವತಿ ಆಗದೆ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಶೀಘ್ರವಾಗಿ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.

ಉಡುಪಿ: ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ – Vishwanews24

ಜಿಲ್ಲೆ ಅಭಿವೃದ್ಧಿ ಆಗಬೇಕು ಅದಕ್ಕೆ ಬೇಕಾದ ವ್ಯವಸ್ಥೆ ಆಗಬೇಕು. ರಸ್ತೆ, ನೀರಾವರಿ, ಸೇತುವೆಗಳ ಅಭಿವೃದ್ಧಿ ಆಗಬೇಕಾದರೆ ಅದಕ್ಕೆ ಅನುದಾನ ಬೇಕು ಹಾಗೂ ಬಂದ ಅನುದಾನಗಳು ಸಮರ್ಪಕವಾಗಿ ಬಳಕೆ ಆಗಬೇಕು. ಅದು ಬಿಟ್ಟು ತಿಕ್ಕಾಟ ನಡೆಯುತ್ತಿದ್ದರೆ ಅಭಿವೃದ್ಧಿ ಆಗವುದಿಲ್ಲ. ಜಿಲ್ಲೆಯಲ್ಲಿ ಸದ್ಯ ಮಳೆ ನಿಂತಿದ್ದು ರಸ್ತೆಗಳಲ್ಲೇ ಹದಗೆಟ್ಟಿದೆ. ಇದನ್ನು ಸರಿಪಡಿಸಬೇಕು. ಆದರೆ ಗುತ್ತಿಗೆದಾರರ ಆರೋಪಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಜನಪ್ರನಿಧಿಗಳ ಜವಾಬ್ದಾರಿ ಎಂದರು. ಹಾಗೂ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಜಿಲೆಯಲ್ಲಿ ಗುತ್ತಿಗೆದಾರರಿಗೆ 100 ಕೋಟಿ ರೂ ಹಣ ಬರಲು ಬಾಕಿ ಇದೆ. ಆದರೆ ಇದು 40 ಶೇ,. ಕಮಿಷನ್ ವಿವಾದದಿಂದ ಬಾಕಿ ಇದೆ ಎಂದು ಹೇಳಲು ಆಗುವಿದಿಲ್ಲ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರದ ನಿಯಮಾವಳಿಯ ಪ್ರಕಾರವೇ ಕಾಮಗಾರಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಗುಣಮಟ್ಟದ ಕಾಮಗಾರಿಯನ್ನು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗುತ್ತಿಗೆದಾರರಾದ ವಾದಿರಾಜ ಶೆಟ್ಟಿ, ಜಯರಾಮ್ ಸಾಲಿಯಾನ್ ಬೋಳ, ಜೀವನ್ ಶೆಟ್ಟಿ ಬ್ರಹ್ಮಾವರ ಇದ್ದರು.

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

4 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

5 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

6 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

6 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

6 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

6 hours ago