Featured

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

 

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ ಹಾಗೂ ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು.

ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31 ರ ಒಳಗೆ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡಿದ ದೋಣಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಜಿಲ್ಲೆಯ ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago