Featured

ಉಡುಪಿ : Zee Kannada ರಿಯಾಲಿಟಿ ಶೋ ನಲ್ಲಿ ಯಕ್ಷಗಾನಕ್ಕೆ ಅವಮಾನ: ಯಕ್ಷಾಭಿಮಾನಿಗಳಿಂದ ಸಚಿವ ಸುನೀಲ್‌ ಹಾಗೂ ಕೋಟಾ ಠಾಣೆಗೆ ದೂರು – Vishwanews24

Zee Kannada ರಿಯಾಲಿಟಿ ಶೋ ನಲ್ಲಿ ನಡೆದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ..

ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ..

ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು..

ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹ..

ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರ ಭರವಸೆ..

ಉಡುಪಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಷೋನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಾಹಿನಿಯನ್ನು ಬಹಿಷ್ಕರಿಸುವ ಬಗ್ಗೆ ಯಕ್ಷಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್‌ಗೆ ದೂರು ನೀಡಿದ್ದಾರೆ.

ಕನ್ನಡ ಮನೋರಂಜನ ವಾಹಿನಿಯೊಂದರ ರಿಯಾಲಿಟಿ ಷೋನಲ್ಲಿ ನಡೆದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ.

ಅದರಲ್ಲಿ ಗಂಡುಕಲೆಯನ್ನು ಅಶ್ಲೀಲವಾಗಿ ಬಿಂಬಿಸಿದ್ದಾರೆ ಎಂಬ ಆರೋಪವನ್ನು ಸಾಮಾಜಿಕ ಜಾಲತಾಣದಲ್ಲಿ ಯಕ್ಷಾಭಿಮಾನಿಗಳು ನಡೆಸುತ್ತಿದ್ದಾರೆ. ಇದೇ ಖಾಸಗಿ ವಾಹಿನಿಯಿಂದ ಸತತ ಮೂರನೇ ಬಾರಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ – Vishwanews24 

ಯಾವುದೇ ಖಾಸಗಿ ವಾಹಿನಿಯಲ್ಲೂ ಯಕ್ಷಗಾನಕ್ಕೆ ಅವಮಾನವಾಗಬಾರದು. ಈ ಬಗ್ಗೆ ಪರೀಕ್ಷಿಸಲು ಸಮಿತಿ ರಚನೆ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್‌ಗೆ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದು, ಜೊತೆಗೆ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಗೆ ದೂರು ಕೂಡಾ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ದೇವರ ಆರಾಧನೆಯ ಭಾಗವಾಗಿ ನಡೆಯುವ ಯಕ್ಷಗಾನಕ್ಕೆ ಹಾಗೂ ವೇಷಧಾರಿಗಳಿಗೆ ಸಿನಿಮಾ ನಟರಂತೆ ಅಭಿಮಾನಿಗಳಿದ್ದಾರೆ. ಕರಾವಳಿ ಭಾಗದಲ್ಲಿ ಹರಕೆ ಹೊತ್ತು ಯಕ್ಷಗಾನಗಳನ್ನು ನಡೆಸುತ್ತಾರೆ. ಹಲವು ದೇವಾಲಯಗಳು ಯಕ್ಷಗಾನ ಮೇಳ ನಡೆಸುತ್ತಿವೆ. ಇಂತಹ ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago