ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ನಡುವೆ ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚುನಾವಣಾ ಆಯೋಗ ಚಿಹ್ನೆ ನೀಡಿ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಉಪೇಂದ್ರ, ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.
ಎಲ್ಲರಿಗೂ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷದಿಂದ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ. ಉತ್ತಮ ಪ್ರಜಾಕೀಯ ಪಕ್ಷ ನೋಂದಾಯಿತ ಮಾನ್ಯತೆ ಇಲ್ಲದ ಪಕ್ಷವಾಗಿರುವುದರಿಂದ ಚುನಾವಣೆ ವೇಳೆ ಚುನಾವಣಾ ಆಯೋಗದಿಂದ ಚಿಹ್ನೆ ಪಡೆಯಬೇಕಾಗಿದೆ.
ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಉಪೇಂದ್ರ ಅವರು ಈಗಾಗಲೇ ಪಕ್ಷವನ್ನು ಸ್ಥಾಪಿಸಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈಗಾಗಲೇ ಪಕ್ಷಕ್ಕೆ ಗ್ರಾಮ ಪಂಚಾಯತ್ ನಲ್ಲಿ ಬೆಂಬಲಿತ ಸದಸ್ಯ ಕೂಡ ಇದ್ದಾರೆ. ಇದೀಗ ಚುನಾವಣಾ ಆಯೋಗವು ಉತ್ತಮ ಪ್ರಜಾಕೀಯ ಪಾರ್ಟಿಗೆ ಆಟೋ ರಿಕ್ಷಾ ಚಿಹ್ನೆಯನ್ನು ನೀಡಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…