Featured

ಉಡುಪಿ: ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಮತೀಯ ಶಕ್ತಿಗಳ ಓಲೈಕೆಗಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ

ಉಡುಪಿ: ಎರಡು ವರ್ಷಗಳ ಹಿಂದೆ ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ವಿದ್ಯಾರ್ಥಿಗಳ ನಡೆಯನ್ನು ಖಂಡಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜಿ. ರಾಮಕೃಷ್ಣ ರವರಿಗೆ ಶಿಕ್ಷಣ ಇಲಾಖೆಯ ವತಿಯಿಂದ ಆಯ್ಕೆಯಾಗಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರಕಾರ ಮತೀಯ ಶಕ್ತಿಗಳ ಓಲೈಕೆಗಾಗಿ ಹಿಂಪಡೆಯುವ ಮೂಲಕ ರಾಜ್ಯದ ಸಮಸ್ತ ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಶಿಕ್ಷಕರ ಆಯ್ಕೆ ಸಮಿತಿ ಶಿಕ್ಷಕರ ಸಾಧನೆ, ಅರ್ಹತೆಯನ್ನು ಪರಾಮರ್ಶಿಸಿ ಶ್ರೇಷ್ಠ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡುವ ಪ್ರಶಸ್ತಿಯ ಘನತೆಗೆ ರಾಜ್ಯ ಸರ್ಕಾರ ಧಕ್ಕೆ ತಂದಿದೆ. ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ

ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಈ ಜಿಲ್ಲೆಯ ಓರ್ವ ದಕ್ಷ ಪ್ರಾಮಾಣಿಕ ಶಿಕ್ಷಕರಿಗೆ ಮಾಡಿರುವ ಅಪಮಾನ ಇಡೀ ಜಿಲ್ಲೆಯ ಶಿಕ್ಷಣ ವ್ಯವಸ್ಥೆಗೆ ಮಾಡಿದ ಅವಮಾನ.

ವಿದ್ಯಾರ್ಥಿಗಳ ಭವಿಷ್ಯದ ನಿಟ್ಟಿನಲ್ಲಿ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಕಾಪಾಡಲು ಮುಂದಾದ ಪ್ರಾಂಶುಪಾಲರನ್ನು ಗುರಿಯಾಗಿಸಿ ಮಾನಸಿಕ ಸ್ಥೆರ್ಯ ಕುಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಿಜಾಬ್ ವಿವಾದದ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧಕ್ಕೆ ತಂದ ಮತೀಯ ಶಕ್ತಿಗಳಿಗೆ ರಾಜ್ಯ ಸರ್ಕಾರ ಪರೋಕ್ಷ ಬೆಂಬಲ ನೀಡುತ್ತಿರುವುದು ದುರದೃಷ್ಟಕರ.

ರಾಜ್ಯ ಸರ್ಕಾರ ತಕ್ಷಣ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಿ ಪ್ರಶಸ್ತಿಗೆ ಅತ್ಯಂತ ಅರ್ಹರಾದ ಬಿ.ಜಿ. ರಾಮಕೃಷ್ಣ ರವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸ ಬೇಕು. ತಪ್ಪಿದಲ್ಲಿ ಜಿಲ್ಲೆಯ ಶಿಕ್ಷಕರಿಗೆ ನೈತಿಕ ಸ್ಥೆರ್ಯ ತುಂಬುವ ನಿಟ್ಟಿನಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago