ನವದೆಹಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉದ್ಘಾಟನೆ ಮಾಡಿದ್ದಾರೆ.
ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕವಷ್ಟೇ ಅಲ್ಲ, ರೈತರು, ಪಶು ಪಾಲಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಪ್ರವಾಸೋದ್ಯಮವು ಗರಿಷ್ಠ ಲಾಭವನ್ನು ಪಡೆಯುತ್ತದೆ, ಅಲ್ಲದೆ, ಇಲ್ಲಿನ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಇಂದು ನನ್ನ ಸಂತೋಷ ಎರಡು ಪಟ್ಟು ಹೆಚ್ಚಾಗಿದೆ. ನನ್ನಲ್ಲಿನ ಆಧ್ಯಾತ್ಮಿಕ ಪ್ರಯಾಣದ ಬಗೆಗಿನ ಕುತೂಹಲ ಹೆಚ್ಚಾಗಿದ್ದು, ವಿಮಾನ ನಿಲ್ದಾಣದ ಉದ್ಘಾಟನೆ ಸಂತೃಪ್ತಿಯ ಭಾವನೆಯನ್ನು ತಂದಿದೆ. ಪೂರ್ವಾಂಚಲದ ಪ್ರತಿನಿಧಿಯಾಗಿ, ಬದ್ಧತೆಯ ನೆರವೇರಿಕೆಗೆ ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕೇಂದ್ರ ಸಂಪುಟ ಜೂನ್ 2020 ರಲ್ಲಿ ಅನುಮೋದನೆ ನೀಡಿತ್ತು.
ಕುಶಿನಗರ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ (ಕುಶಿನಗರವು ಬೌದ್ಧ ಸಾಂಸ್ಕೃತಿಕ ತಾಣ) ನಂತಹ ಹಲವಾರು ಬೌದ್ಧ ಸಾಂಸ್ಕೃತಿಕ ತಾಣಗಳ ಹತ್ತಿದಲ್ಲಿದೆ. ಕುಶಿನಗರ ವಿಮಾನ ನಿಲ್ದಾಣವನ್ನು “ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ವಾಗಿ ಘೋಷಣೆ ಮಾಡಿರುವುದು ಇತರೆ ರಾಷ್ಟ್ರಗಳೊಂದಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸುಧಾರಿತ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ, ದೇಶೀಯ/ಅಂತರಾಷ್ಟ್ರೀಯ ಪ್ರವಾಸೋದ್ಯಮ ಮತ್ತು ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…