Featured

ಉತ್ತರಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ಉತ್ತರಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ – Vishwanews24

ನವದೆಹಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉದ್ಘಾಟನೆ ಮಾಡಿದ್ದಾರೆ.

ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕವಷ್ಟೇ ಅಲ್ಲ, ರೈತರು, ಪಶು ಪಾಲಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಪ್ರವಾಸೋದ್ಯಮವು ಗರಿಷ್ಠ ಲಾಭವನ್ನು ಪಡೆಯುತ್ತದೆ, ಅಲ್ಲದೆ, ಇಲ್ಲಿನ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ಇಂದು ನನ್ನ ಸಂತೋಷ ಎರಡು ಪಟ್ಟು ಹೆಚ್ಚಾಗಿದೆ. ನನ್ನಲ್ಲಿನ ಆಧ್ಯಾತ್ಮಿಕ ಪ್ರಯಾಣದ ಬಗೆಗಿನ ಕುತೂಹಲ ಹೆಚ್ಚಾಗಿದ್ದು, ವಿಮಾನ ನಿಲ್ದಾಣದ ಉದ್ಘಾಟನೆ ಸಂತೃಪ್ತಿಯ ಭಾವನೆಯನ್ನು ತಂದಿದೆ. ಪೂರ್ವಾಂಚಲದ ಪ್ರತಿನಿಧಿಯಾಗಿ, ಬದ್ಧತೆಯ ನೆರವೇರಿಕೆಗೆ ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕೇಂದ್ರ ಸಂಪುಟ ಜೂನ್ 2020 ರಲ್ಲಿ ಅನುಮೋದನೆ ನೀಡಿತ್ತು.

ಕುಶಿನಗರ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ (ಕುಶಿನಗರವು ಬೌದ್ಧ ಸಾಂಸ್ಕೃತಿಕ ತಾಣ) ನಂತಹ ಹಲವಾರು ಬೌದ್ಧ ಸಾಂಸ್ಕೃತಿಕ ತಾಣಗಳ ಹತ್ತಿದಲ್ಲಿದೆ. ಕುಶಿನಗರ ವಿಮಾನ ನಿಲ್ದಾಣವನ್ನು “ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ವಾಗಿ ಘೋಷಣೆ ಮಾಡಿರುವುದು ಇತರೆ ರಾಷ್ಟ್ರಗಳೊಂದಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸುಧಾರಿತ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ, ದೇಶೀಯ/ಅಂತರಾಷ್ಟ್ರೀಯ ಪ್ರವಾಸೋದ್ಯಮ ಮತ್ತು ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

20 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

20 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

22 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

22 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

22 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

22 hours ago