Featured

ಉತ್ತರಪ್ರದೇಶ :ಎರಡು ವರ್ಷಗಳಲ್ಲಿ ಒಂದೇ ಒಂದು ಕೋಮುಗಲಭೆ ಇಲ್ಲದೆ ರಾಜ್ಯ ಶಾಂತವಾಗಿದೆ : ಯೋಗಿ ಆದಿತ್ಯನಾಥ್ – Vishwanews24

ಲಕ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಳಿಸಿದ್ದು, ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಗಲಭೆಯೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಲು ರಾಜ್ಯದ 23 ಕೋಟಿ ಜನತೆ ಸಕಾರಾತ್ಮಕವಾಗಿ ಸಹಕರಿಸಿದ್ದರಿಂದಲೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ಹಾಗಾಗಿ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಯೋಗಿ ಆದಿತ್ಯನಾಥ್ ಹೇಳಿದರು.

ಕೋಮುಗಲಭೆ ಇಲ್ಲದೆ ರಾಜ್ಯ ಶಾಂತವಾಗಿದೆ

ಮಾರ್ಚ್ 19, 2017ರಲ್ಲಿ ಉತ್ತರಪ್ರದೇಶದ ಜನತೆ ಸೇವೆ ಮಾಡಲು ನಮಗೆ ಅವಕಾಶ ದೊರೆಯಿತು. ಅಲ್ಲಿಂದ ಇಲ್ಲಿಯವರೆಗೆ ಹದಗೆಟ್ಟಿದ್ದ ಉತ್ತರಪ್ರದೇಶದ ಪರಿಸ್ಥಿತಿಯನ್ನು ಬದಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಈ ಹಿಂದೆ ರಾಜ್ಯದಲ್ಲಿದ್ದ ಕೋಮುಗಲಭೆ ಈಗ ಹೆಸರಿಲ್ಲದಂತಾಗಿದೆ. ಈಗ ರಾಜ್ಯ ಶನತ್ವಾಗಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ. ಇದು ನಮ್ಮ ಸರ್ಕಾರದ ಯಶಸ್ವಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಯೋಗಿ ಹೇಳಿದರು.

ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಆಗದ ಬಂಡವಾಳ ಹೂಡಿಕೆಯನ್ನು ನಾವು ಎರಡು ವರ್ಷಗಳಲ್ಲಿ ದ್ವಿಗುಣ ಮಾಡಿದ್ದೇವೆ. 15 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ಒದಗಿಸಲಾಗಿದೆ. 68 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನವರಿ 24ರಂದು ಉತ್ತರಪ್ರದೇಶ ಸಂಸ್ಥಾಪನಾ ದಿನವನ್ನು ರಾಜ್ಯದಲ್ಲಿ ಆಚರಿಸಲಾಯಿತು ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಎಸ್ಪಿ-ಬಿಎಸ್ಪಿ ಸರ್ಕಾರ ಟಾರ್ಗೆಟ್ ಮಾಡಿದ ಯೋಗಿ ಆದಿತ್ಯನಾಥ್ 
ಈ ಹಿಂದಿನ ಎಸ್ಪಿ-ಬಿಎಸ್ಪಿ ಸರ್ಕಾರಗಳ ಅಧಿಕಾರವಧಿಯನ್ನು ಟಾರ್ಗೆಟ್ ಮಾಡಿದ ಯೋಗಿ, 1990ರಿಂದಲೂ ಎಸ್ಪಿ-ಬಿಎಸ್ಪಿ ಅಧಿಕಾರವಧಿಯಲ್ಲಿ ರಾಜ್ಯದಲ್ಲಿ ಗಲಭೆ, ದಂಧೆ, ಹಗರಣಗಳು ಎಗ್ಗಿಲ್ಲದಂತೆ ನಡೆದಿದ್ದವು. ರಾಜ್ಯದ ಅಭಿವೃದ್ಧಿಯೂ ಕುಂಠಿತವಾಗಿತ್ತು.  ಅಪರಾಧಗಳ ಸಂಖ್ಯೆ ಹೆಚ್ಚಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಸರ್ಕಾರದ ನೀತಿಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಎದುರಾಗಿತ್ತು ಎಂದು ಹೇಳಿದರು.

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

2 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago