ಉಡುಪಿ: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಚಾರಣಕ್ಕೆಂದು ತೆರಳಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ.
ಕುಂದಾಪುರದ ಕುಂಭಾಶಿಯ ಪದ್ಮನಾಭ ಭಟ್ ಮೃತ ದುರ್ದೈವಿ.
ಶಿಖರಕ್ಕೆ ಚಾರಣಕ್ಕೆಂದು ತೆರಳಿದ್ದ 22 ಮಂದಿಯ ಪೈಕಿ ಪದ್ಮನಾಭ ಭಟ್ ಕೂಡ ಒಬ್ಬರಾಗಿದ್ದರು. ಮೂಲತಃ ಕುಂದಾಪುರದವರಾಗಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಪದ್ಮನಾಭ ಅವರು ಮೇ 29ರಂದು ಉತ್ತರಕಾಂಡದ ಸಹಸ್ತ್ರ ತಾಲ್ ಶಿಖರಕ್ಕೆ ಚಾರಣಕ್ಕೆಂದು ತೆರಳಿದ್ದರು. ಚಾರಣ ಮುಗಿಸಿ ಶಿಖರದಿಂದ ಕೆಳಗೆ ಬರುವಾಗ ಹವಾಮಾನ ವೈಪರಿತ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ಕರ್ನಾಟಕದ ನಾಲ್ವರು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದರು.
9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 4 ಮೃತದೇಹಗಳು ದೆಹಲಿಯಿಂದ 2 ಪ್ರತ್ಯೇಕ ವಿಮಾನಗಳಲ್ಲಿ ಬೆಂಗಳೂರಿಗೆ ಬಂದಿವೆ. ಈಗಾಗಲೇ ಪದ್ಮನಾಭ್ ಅವರ ಮೃತದೇಹವನ್ನು ಹೊರತು ಪಡಿಸಿ ಉಳಿದ ಮೂವರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇನ್ನು ಪದ್ಮನಾಭ್ ಅವರ ಮೃತದೇಹವನ್ನು ಕುಂದಾಪುರಕ್ಕೆ ತೆಗೆದುಕೊಂಡು ಬರಲು ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…