ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ – vishwanews24

Featured, ರಾಜ್ಯ ನ್ಯೂಸ್

ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ  125 ಕ್ಕೆ ಏರಿಕೆ 

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.

ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗನಬಾವು ಹರಡುವುದು ಹೇಗೆ?
ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.

ಮಂಗನಬಾವು ಲಕ್ಷಣಗಳೇನು?
ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಸದ್ಯ ಮಕ್ಕಳಿಗೂ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಕ್ಕಳಲ್ಲಿ ಕಾಣಿಸಿಕೊಂಡ ಮಂಗಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸುವುದರ ಜತೆಗೆ, ರೋಗ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24

Leave a Reply