Featured

ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ – vishwanews24

ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ  125 ಕ್ಕೆ ಏರಿಕೆ

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.

ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.

ಮಂಗನಬಾವು ಹರಡುವುದು ಹೇಗೆ?
ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.

ಮಂಗನಬಾವು ಲಕ್ಷಣಗಳೇನು?
ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಸದ್ಯ ಮಕ್ಕಳಿಗೂ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಕ್ಕಳಲ್ಲಿ ಕಾಣಿಸಿಕೊಂಡ ಮಂಗಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸುವುದರ ಜತೆಗೆ, ರೋಗ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

34 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

50 minutes ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 hour ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 hour ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 hour ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago