ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.
ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.
ಮಂಗನಬಾವು ಹರಡುವುದು ಹೇಗೆ?
ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.
ಮಂಗನಬಾವು ಲಕ್ಷಣಗಳೇನು?
ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಸದ್ಯ ಮಕ್ಕಳಿಗೂ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಲ್ಲಿ ಕಾಣಿಸಿಕೊಂಡ ಮಂಗಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸುವುದರ ಜತೆಗೆ, ರೋಗ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…