ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.
ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಅದಾದ ಮೂರು ದಿನದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ 125 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದ್ದಂತೆ ವೈದ್ಯಕೀಯ ತಂಡವೊಂದನ್ನು ಮುಂಡಗೋಡು ವಸತಿ ನಿಲಯಕ್ಕೆ ನಿಯೋಜನೆ ಮಾಡಲಾಗಿದ್ದು, ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.
ಮಂಗನಬಾವು ಹರಡುವುದು ಹೇಗೆ?
ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.
ಮಂಗನಬಾವು ಲಕ್ಷಣಗಳೇನು?
ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಸದ್ಯ ಮಕ್ಕಳಿಗೂ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಲ್ಲಿ ಕಾಣಿಸಿಕೊಂಡ ಮಂಗಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಿಸುವುದರ ಜತೆಗೆ, ರೋಗ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…