ಕೊಪ್ಪಳ: ಏತನೀರಾವರಿ, ಸಮನಾಂತರ ಜಲಾಶಯ, ಕಾಲುವೆಗಳ ನವೀಕರಣ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ನೀರಾವರಿ ಸಚಿವನಾಗಿದ್ದಾಗ ತುಂಗಭದ್ರ ನಾಲೆಗಳ ಆಧುನೀಕರಣಕ್ಕೆ 1200 ಕೋಟಿ ಅನುದಾನ ನೀಡಿದ ಪರಿಣಾಮ ಇಂದು ಕಾಮಗಾರಿ ಪೂರ್ಣಗೊಂಡಿವೆ. ಕೊಪ್ಪಳ ಏತ ನೀರಾವರಿ ಯೋಜನೆ ಅಂತಿಮ ಹಂತದಲ್ಲಿ ಇದೆ ಎಂದರು.
ಕೃಷ್ಣಾ ಕೊಳ್ಳದ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಎ ಮತ್ತು ಬಿ ಸ್ಕೀಂ ಮಾಡಿ ಮೋಸ ಮಾಡಿದೆ. ಯಾವ ರಾಜ್ಯಗಳಲ್ಲಿ ಇರದ ಈ ಸ್ಕೀಂ ನಮಗೆ ಯಾಕೆ ಎಂದು ಅನೇಕ ಯೋಜನೆಗಳನ್ನು ಸೇರಿಸಿ ಆರಂಭಮಾಡಿದ್ದೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕಾಗಿ ಕೃಷ್ಣೆಯ ಕಡೆಗೆ ನಡಿಗೆ ಎಂಬ ಪಾದಯಾತ್ರೆ ಹಮ್ಮಿಕೊಂಡು ಸಂಗಮನಾಥನ ಮೇಲೆ ಆಣೆ ಮಾಡಿ 50 ಸಾವಿರ ಕೋಟಿ ನೀಡುವುದಾಗಿ ಹೇಳಿತ್ತು. ಆದರೆ ಅದು ಖರ್ಚು ಮಾಡಿದ್ದು 17 ಸಾವಿರ ಕೋಟಿ ಮಾತ್ರ. ಸುಳ್ಳು ಹೇಳಿದ ಕಾಂಗ್ರೆಸ್ ಗೆ ದುಃಸ್ಥಿತಿ ಬಂದಿದೆ ಎಂದರು.
ಉತ್ತರ ಕರ್ನಾಟಕಕ್ಕೆ ಸತತ ಅನ್ಯಾಯ ಮಾಡಿದೆ. ಜನಪರ ಕೆಲಸ ಮಾಡುವ ಬದ್ಧತೆ ಇರಬೇಕು. ಹೈಕ ಗುಲಾಮಗಿರಿಯ ಸಂಕೇತ ಎಂದು ನಮ್ಮ ನಾಯಕರಾದ ಯಡಿಯೂರಪ್ಪನವರು ಅದನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಅವರ ಆಶಯ ಸಾರ್ಥಕಗೊಳಿಸಲು ಮಂಡಳಿಗೆ ಪ್ರತಿವರ್ಷ 3 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಘೋಷಿಸಿದರು.
ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿದೆ. ಅದಕ್ಕಾಗಿ ಕಾರಟಗಿ ಬಳಿ ಸಮಾನಂತರ ಜಲಾಶಯ ನಿರ್ಮಾಣಕ್ಕೆ ಆಂಧ್ರಪ್ರದೇಶದ ಜೊತೆಗೆ ಮಾತನಾಡಿ ಒಪ್ಪಿಗೆ ಪಡೆದು 20 ಕೋಟಿ ವೆಚ್ಚದ ಡಿಪಿಆರ್ ತಯಾರಿಸಲು 14 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾನಿ, ಸಂಸದ ಸಂಗಣ್ಣ ಕರಡಿ, ಪ್ರತಾಪಸಿಂಹ ಮಾತನಾಡಿದರು. ಶಾಸಕರಾದ ಪರಣ್ಣ ಮುನವಳ್ಳಿ, ಮಹೇಶ, ಬಸವರಾಜ ದಡಢಸಗೂರ ಮುಂತಾದವರು ಇದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…