ಕೊಪ್ಪಳ: ಏತನೀರಾವರಿ, ಸಮನಾಂತರ ಜಲಾಶಯ, ಕಾಲುವೆಗಳ ನವೀಕರಣ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ನೀರಾವರಿ ಸಚಿವನಾಗಿದ್ದಾಗ ತುಂಗಭದ್ರ ನಾಲೆಗಳ ಆಧುನೀಕರಣಕ್ಕೆ 1200 ಕೋಟಿ ಅನುದಾನ ನೀಡಿದ ಪರಿಣಾಮ ಇಂದು ಕಾಮಗಾರಿ ಪೂರ್ಣಗೊಂಡಿವೆ. ಕೊಪ್ಪಳ ಏತ ನೀರಾವರಿ ಯೋಜನೆ ಅಂತಿಮ ಹಂತದಲ್ಲಿ ಇದೆ ಎಂದರು.
ಕೃಷ್ಣಾ ಕೊಳ್ಳದ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಎ ಮತ್ತು ಬಿ ಸ್ಕೀಂ ಮಾಡಿ ಮೋಸ ಮಾಡಿದೆ. ಯಾವ ರಾಜ್ಯಗಳಲ್ಲಿ ಇರದ ಈ ಸ್ಕೀಂ ನಮಗೆ ಯಾಕೆ ಎಂದು ಅನೇಕ ಯೋಜನೆಗಳನ್ನು ಸೇರಿಸಿ ಆರಂಭಮಾಡಿದ್ದೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕಾಗಿ ಕೃಷ್ಣೆಯ ಕಡೆಗೆ ನಡಿಗೆ ಎಂಬ ಪಾದಯಾತ್ರೆ ಹಮ್ಮಿಕೊಂಡು ಸಂಗಮನಾಥನ ಮೇಲೆ ಆಣೆ ಮಾಡಿ 50 ಸಾವಿರ ಕೋಟಿ ನೀಡುವುದಾಗಿ ಹೇಳಿತ್ತು. ಆದರೆ ಅದು ಖರ್ಚು ಮಾಡಿದ್ದು 17 ಸಾವಿರ ಕೋಟಿ ಮಾತ್ರ. ಸುಳ್ಳು ಹೇಳಿದ ಕಾಂಗ್ರೆಸ್ ಗೆ ದುಃಸ್ಥಿತಿ ಬಂದಿದೆ ಎಂದರು.
ಉತ್ತರ ಕರ್ನಾಟಕಕ್ಕೆ ಸತತ ಅನ್ಯಾಯ ಮಾಡಿದೆ. ಜನಪರ ಕೆಲಸ ಮಾಡುವ ಬದ್ಧತೆ ಇರಬೇಕು. ಹೈಕ ಗುಲಾಮಗಿರಿಯ ಸಂಕೇತ ಎಂದು ನಮ್ಮ ನಾಯಕರಾದ ಯಡಿಯೂರಪ್ಪನವರು ಅದನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಅವರ ಆಶಯ ಸಾರ್ಥಕಗೊಳಿಸಲು ಮಂಡಳಿಗೆ ಪ್ರತಿವರ್ಷ 3 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಘೋಷಿಸಿದರು.
ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿದೆ. ಅದಕ್ಕಾಗಿ ಕಾರಟಗಿ ಬಳಿ ಸಮಾನಂತರ ಜಲಾಶಯ ನಿರ್ಮಾಣಕ್ಕೆ ಆಂಧ್ರಪ್ರದೇಶದ ಜೊತೆಗೆ ಮಾತನಾಡಿ ಒಪ್ಪಿಗೆ ಪಡೆದು 20 ಕೋಟಿ ವೆಚ್ಚದ ಡಿಪಿಆರ್ ತಯಾರಿಸಲು 14 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾನಿ, ಸಂಸದ ಸಂಗಣ್ಣ ಕರಡಿ, ಪ್ರತಾಪಸಿಂಹ ಮಾತನಾಡಿದರು. ಶಾಸಕರಾದ ಪರಣ್ಣ ಮುನವಳ್ಳಿ, ಮಹೇಶ, ಬಸವರಾಜ ದಡಢಸಗೂರ ಮುಂತಾದವರು ಇದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…