ಬೆಂಗಳೂರು: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಕುರಿತಂತೆ ಸಚಿವ ಉಮೇಶ್ ಕತ್ತಿ ಹೇಳಿಕೆ ಕುರಿತಂತೆ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಉಮೇಶ್ ಕತ್ತಿ ಅವರು ಈ ರೀತಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಹಲವಾರು ವರ್ಷಗಳಿಂದ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ಹೇಳಿಕೆ ನೀಡುತ್ತಲೇ ಇದ್ದಾರೆ. ಅವರ ಹೇಳಿಕೆಗೆ ಅವರೇ ಉತ್ತರಿಸಬೇಕು. ಆದರೆ ಸರ್ಕಾರದ ಮಟ್ಟದಲ್ಲಿ ಅಂತಹ ಯಾವುದೇ ಯೋಜನೆ, ಯೋಚನೆ ಇಲ್ಲ ಎಂದರು.
ರಾಜ್ಯ ವಿಭಜನೆ ಮತ್ತು ಪ್ರತ್ಯೇಕ ರಾಜ್ಯ ರಚನೆ ಕುರಿತು ಅವರು ಆಗಾಗ ಒತ್ತಾಯಿಸುತ್ತಲೇ ಬಂದಿದ್ದಾರೆ. ದಕ್ಷಿಣ ಕರ್ನಾಟಕದವರಿಗೆ ಕೇಂದ್ರೀಕೃತ ಸ್ಥಾನವಾಗಿರುವ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಭಾಗದವರು ತೊಂದರೆ ಅನುಭವಿಸುತ್ತಿರುವ ಕಾರಣ ಪ್ರತ್ಯೇಕ ರಾಜ್ಯ ಬೇಕು ಎಂದು ಕೇಳುತ್ತಿದ್ದಾರೆ. ಅವರ ಅಜೆಂಡಾವೂ ಅದೇ ಎಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಆಪಾದಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…