Featured

ಉತ್ತರ ಪ್ರದೇಶದಲ್ಲಿ ಜೈಷ್‌ ಸಂಪರ್ಕ ಹೊಂದಿರುವ ಇಬ್ಬರು ಶಂಕಿತ ಉಗ್ರರ ಬಂಧನ – Vishwanews24

ನವದೆಹಲಿ : ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಜೈಷ್ ಏ ಮೊಹಮ್ಮದ್ ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜಮ್ಮುಕಾಶ್ಮೀರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಶಾಹ್ ನವಾಜ್ ಅಹ್ಮದ್, ಜಮ್ಮುಕಾಶ್ಮೀರದ ಕುಲ್ಗಾಮದವನು. ಈತ ಜೈಷೆ ಸಂಘಟನೆಗೆ ಯುವಕರನ್ನು ನೇಮಕ ಮಾಡುವ ಕೆಲಸ ಮಾಡುತ್ತಿದ್ದ. ಜೊತೆಗೆ ಈತ ಗ್ರೆನೇಡ್ ಎಕ್ಸ್ ಪರ್ಟ್ ಕೂಡ ಆಗಿದ್ದಾನೆ ಎನ್ನಲಾಗಿದೆ. ಮತ್ತೋರ್ವ ಬಂಧಿತ ಅಖೀಬ್ ಅಹ್ಮದ್ ಮಲಿಕ್ ಪುಲ್ವಾಮಾ ನಿವಾಸಿ ಎಂದು ಹೇಳಲಾಗುತ್ತಿದೆ.

ಬಂಧಿತ ಶಾನವಾಜ್ ಪುಲ್ವಾಮಾ ದಾಳಿಯ ಹೊಣೆ ಹೊತ್ತಿರುವ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಹೊಸದಾಗಿ ನೇಮಕಗೊಂಡಿದ್ದಾನೆ. ಪುಲ್ವಾಮಾ ದಾಳಿಗೂ ಮುನ್ನ ಹಾಗೂ ನಂತರ ಬಂಧಿತ ಉಗ್ರರು ಉತ್ತರ ಪ್ರದೇಶಕ್ಕೆ ಬಂದಿದ್ದಾರೆ ಎಂದು ಹೇಳುವುದು ಕಷ್ಟ. ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವುದಕ್ಕೆ ನಮಗೆ ಹಲವಾರು ಸಾಕ್ಷ್ಯಗಳು ಸಿಕ್ಕಿವೆ. ಆದರೆ ಅವುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ. ಈ ಸಂಬಂಧ ತನಿಖೆ ಆರಂಭವಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಓ.ಪಿ. ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಆಯಂಟಿ ಟೆರರ್ ಸ್ವಾಡ್ ಈ ಇಬ್ಬರನ್ನು ನಿನ್ನೆ ಪಶ್ಚಿಮ ಉತ್ತರ ಪ್ರದೇಶದ ದಿಯೋಬಾಂದ್ ನಲ್ಲಿ ಬಂಧಿಸಿದೆ. ಆರೋಪಿಗಳ ಬಳಿ ಹ್ಯಾಂಡ್ ಗನ್ ಹಾಗೂ ಬುಲೆಟ್ ಗಳು ಪತ್ತೆಯಾಗಿವೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago