Featured

ಉತ್ತರ ಪ್ರದೇಶದಲ್ಲಿ ಜೈಷ್‌ ಸಂಪರ್ಕ ಹೊಂದಿರುವ ಇಬ್ಬರು ಶಂಕಿತ ಉಗ್ರರ ಬಂಧನ – Vishwanews24

ನವದೆಹಲಿ : ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಜೈಷ್ ಏ ಮೊಹಮ್ಮದ್ ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜಮ್ಮುಕಾಶ್ಮೀರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಶಾಹ್ ನವಾಜ್ ಅಹ್ಮದ್, ಜಮ್ಮುಕಾಶ್ಮೀರದ ಕುಲ್ಗಾಮದವನು. ಈತ ಜೈಷೆ ಸಂಘಟನೆಗೆ ಯುವಕರನ್ನು ನೇಮಕ ಮಾಡುವ ಕೆಲಸ ಮಾಡುತ್ತಿದ್ದ. ಜೊತೆಗೆ ಈತ ಗ್ರೆನೇಡ್ ಎಕ್ಸ್ ಪರ್ಟ್ ಕೂಡ ಆಗಿದ್ದಾನೆ ಎನ್ನಲಾಗಿದೆ. ಮತ್ತೋರ್ವ ಬಂಧಿತ ಅಖೀಬ್ ಅಹ್ಮದ್ ಮಲಿಕ್ ಪುಲ್ವಾಮಾ ನಿವಾಸಿ ಎಂದು ಹೇಳಲಾಗುತ್ತಿದೆ.

ಬಂಧಿತ ಶಾನವಾಜ್ ಪುಲ್ವಾಮಾ ದಾಳಿಯ ಹೊಣೆ ಹೊತ್ತಿರುವ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಹೊಸದಾಗಿ ನೇಮಕಗೊಂಡಿದ್ದಾನೆ. ಪುಲ್ವಾಮಾ ದಾಳಿಗೂ ಮುನ್ನ ಹಾಗೂ ನಂತರ ಬಂಧಿತ ಉಗ್ರರು ಉತ್ತರ ಪ್ರದೇಶಕ್ಕೆ ಬಂದಿದ್ದಾರೆ ಎಂದು ಹೇಳುವುದು ಕಷ್ಟ. ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವುದಕ್ಕೆ ನಮಗೆ ಹಲವಾರು ಸಾಕ್ಷ್ಯಗಳು ಸಿಕ್ಕಿವೆ. ಆದರೆ ಅವುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ. ಈ ಸಂಬಂಧ ತನಿಖೆ ಆರಂಭವಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಓ.ಪಿ. ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಆಯಂಟಿ ಟೆರರ್ ಸ್ವಾಡ್ ಈ ಇಬ್ಬರನ್ನು ನಿನ್ನೆ ಪಶ್ಚಿಮ ಉತ್ತರ ಪ್ರದೇಶದ ದಿಯೋಬಾಂದ್ ನಲ್ಲಿ ಬಂಧಿಸಿದೆ. ಆರೋಪಿಗಳ ಬಳಿ ಹ್ಯಾಂಡ್ ಗನ್ ಹಾಗೂ ಬುಲೆಟ್ ಗಳು ಪತ್ತೆಯಾಗಿವೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

1 hour ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

1 hour ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

1 hour ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago