Featured

ಉತ್ತರ ಪ್ರದೇಶ : ಮದರಸಾಗಳಲ್ಲಿ ಇನ್ಮುಂದೆ ತರಗತಿ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯ  – Vishwanews24

ಉತ್ತರ ಪ್ರದೇಶ : ಮದರಸಾಗಳಲ್ಲಿ ಇನ್ಮುಂದೆ ತರಗತಿ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯ

ಲಖನೌ: ಉತ್ತರ ಪ್ರದೇಶದ ಎಲ್ಲಾ ಮದರಸಾಗಳು ತರಗತಿ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪಠಿಸುವಂತೆ ಉತ್ತರ ಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಪರವಾಗಿ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಡ್ಯಾನಿಷ್​ ಆಜಾನ್​ ಅನ್ಸಾರಿ ಈ ಆದೇಶ ಹೊರಡಿಸಿದ್ದಾರೆ.

ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ನಡೆಸಿದ ಸಭೆಯಲ್ಲಿ ಕೆಲ ದಿನಗಳ ಹಿಂದೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಇದೀಗ ಉತ್ತರ ಪ್ರದೇಶ ಸರ್ಕಾರ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಆದೇಶಿಸಿದೆ. 2017ರಲ್ಲಿ ಮದರಸಾ ಶಿಕ್ಷಣ ಮಂಡಳಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಇದೀಗ ಜಾರಿಗೆ ತರಲಾಗಿತ್ತು.

ವಿವಿಧ ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ ಮತ್ತು ಮದರಸಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸಲು ನಾವು ಇಚ್ಚಿಸುತ್ತೇವೆ. ಇದರಿಂದಾಗಿ ಅವರು ಧಾರ್ಮಿಕ ಅಧ್ಯಯನದ ಹೊರತಾಗಿಯೂ ನಮ್ಮ ಇತಿಹಾಸ ಮತ್ತು ಸಂಸ್ಕೃತಿಯನ್ನು ತಿಳಿದುಕೊಳ್ಳುತ್ತಾರೆ. ಇದನ್ನು ಈಗಾಗಲೇ ಕೆಲವು ಮದರಸಾಗಳಲ್ಲಿ ಪಠಿಸಲಾಗಿದೆ. ಮುಂಬರುವ ಶೈಕ್ಷಣಿಕ ಅಧಿವೇಶನದಿಂದ ನಾವು ಈಗ ಅದನ್ನು ಕಡ್ಡಾಯಗೊಳಿಸಿದ್ದೇವೆ ಎಂದು ಅಧ್ಯಕ್ಷ ಇಫ್ತಿಕರ್ ಅಹ್ಮದ್ ಜಾವೇದ್ ಹೇಳಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago