ಲಕ್ನೋ: ಉತ್ತರ ಪ್ರದೇಶ ಚುನಾವಣಾ ಕಾವು ದಿನದಿನಕ್ಕೆ ಹೆಚ್ಚುತ್ತಿದ್ದು, ಭಾರೀ ಚರ್ಚೆಯ ಬಳಿಕ ಬಿಜೆಪಿಯು ರಾಜಧಾನಿ ಲಕ್ನೋ ದ ಎಲ್ಲಾ ಒಂಬತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಆದರೆ ಆಕಾಂಕ್ಷಿಗಳಾದ ಸಮಾಜವಾದಿ ಪಕ್ಷದ ವರಿಷ್ಟ, ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಮತ್ತು ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇತ್ತೀಗಷ್ಟೇ ಬಿಜೆಪಿ ಸೇರಿದ್ದರು. ಇವರು ಲಕ್ನೋ ಕಂಟೋನ್ಮೆಂಟ್ ನಲ್ಲಿ ಟಿಕೆಟ್ ಬಯಸಿದ್ದರು. ಇದೇ ಕ್ಷೇತ್ರದಲ್ಲಿ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಕೂಡಾ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಸಚಿವ ಬ್ರಿಜೇಶ್ ಪಾಠಕ್ ಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ :
ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಅವರ ಸ್ವಯಂ ನಿವೃತ್ತಿಯನ್ನು ಇಂದು ಕೇಂದ್ರ ಸರ್ಕಾರ ಅಂಗೀಕರಿಸಿದ್ದು, ಅವರಿಗೆ ಸರೋಜಿನಿ ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿದೆ. ರಾಜ್ಯದ ಮಹಿಳಾ ಕಲ್ಯಾಣ ಖಾತೆ ರಾಜ್ಯ ಸಚಿವೆ ಸ್ವಾತಿ ಸಿಂಗ್ ಮತ್ತು ಅವರ ಪತಿ ದಯಾಶಂಕರ್ ಸಿಂಗ್ ಇಬ್ಬರೂ ಈ ಸೀಟಿನ ಮೇಲೆ ಕಣ್ಣಿಟ್ಟಿದ್ದರು.
ಲಕ್ನೋ ಕಂಟೋನ್ಮೆಂಟ್ ಪಕ್ಷಕ್ಕೆ ಸುರಕ್ಷಿತ ಸ್ಥಾನ ಎಂದು ಪರಿಗಣಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರೀಟಾ ಬಹುಗುಣ ಜೋಶಿ ಅವರು ಅಪರ್ಣಾ ಯಾದವ್ ಅವರನ್ನು ಸೋಲಿಸಿದ್ದರು.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…