Featured

ಉತ್ತರ ಪ್ರದೇಶ ಸರ್ಕಾರ ಯೋಗಿ ಬಜೆಟ್ : ಗೋಶಾಲೆಗೆ 450 ಕೋಟಿ ಹಾಗೂ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣ ಮೀಸಲು- Vishwanews24

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.

ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಗಮನ ಹರಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ, ಬಜೆಟ್‌ನಲ್ಲಿ ನಿರ್ದಿಷ್ಟವಾಗಿ ಯಾವುದೇ ವೋಟ್‌ಬ್ಯಾಂಕ್ ಓಲೈಕೆಯನ್ನು ಕೇಂದ್ರೀಕರಿಸಿಲ್ಲ ಎಂದು ಹಣಕಾಸು ಸಚಿವ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

ಈ ಬಾರಿ ಉತ್ತರ ಪ್ರದೇಶ ಸರ್ಕಾರ 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದೆ. ಕಳೆದ ಬಾರಿ ಉತ್ತರ ಪ್ರದೇಶ ಸರ್ಕಾರ 4.28 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಬಜೆಟ್ ಗಾತ್ರ ಶೇ.12ರಷ್ಟು ಹೆಚ್ಚಿದೆ. ಸತತ ಮೂರನೇ ಬಾರಿಗೆ ತೆರಿಗೆ ಮುಕ್ತ ಬಜೆಟ್ ಮಂಡಿಸಲಾಗಿದೆ.

ಈ ಹಿಂದೆ ಆಡಳಿತ ನಡೆಸಿದ್ದ ಅಖಿಲೇಶ್ ಯಾದವ್, ಮಾಯಾವತಿ ನೇತೃತ್ವದ ಸರ್ಕಾರಗಳು 3 ಲಕ್ಷ ಕೋಟಿ ಮೀರಿ ಬಜೆಟ್ ಮಂಡಿಸಿಯೇ ಇಲ್ಲ. ಬಜೆಟ್ ನಲ್ಲಿ ಒಟ್ಟು ಶೇ.42 ರಷ್ಟು ಹಣವನ್ನು ಇಂಧನ ಮತ್ತು ಲೋಕೋಪಯೋಗಿ ಇಲಾಖೆಗೆ ಮೀಸಲಿಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು..

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago