Featured

ಉದಯ್‍ಪುರ ಪ್ರಕರಣ : ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ : ರಾಕೇಶ್ ಟಿಕಾಯತ್ – Vishwanews24

ಉದಯ್‍ಪುರ ಪ್ರಕರಣ : ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ : ರಾಕೇಶ್ ಟಿಕಾಯತ್ – Vishwanews24

ನವದೆಹಲಿ: ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.

ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು.

ಭಾರತದಲ್ಲಿ ಸಂವಿಧಾನ, ಕಾನೂನು ಮತ್ತು ಸೆಕ್ಷನ್‍ಗಳಿವೆ. ಆದರೆ ಅವೆಲ್ಲವೂ ಏನು ಮಾಡುತ್ತಿವೆ. ಇದರ ಬದಲು ಪಾಕಿಸ್ತಾನವನ್ನು ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಪಾಕಿಸ್ತಾನದವರು ಏನು ಮಾಡಿದ್ದಾರೆ. ಈ ಕೊಲೆ ಮಾಡಿದವರನ್ನು ಕಾನೂನಿನ ನಿಯಮಾನುಸಾರ ಬಂಧಿಸಿ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago