Featured

ಉದ್ಘಾಟನೆಗೆ ಸಜ್ಜಾಗಿದೆ ಅಬುಧಾಬಿಯ ಮೊದಲ ಹಿಂದೂ ದೇವಾಲಯ –  ಫೆ. 14ರಂದು ಪ್ರಧಾನಿ ಮೋದಿಯಿಂದ ಮಂದಿರ ಲೋಕಾರ್ಪಣೆ – Vishwanews24

ಉದ್ಘಾಟನೆಗೆ ಸಜ್ಜಾಗಿದೆ ಅಬುಧಾಬಿಯ ಮೊದಲ ಹಿಂದೂ ದೇವಾಲಯ –  ಫೆ. 14ರಂದು ಪ್ರಧಾನಿ ಮೋದಿಯಿಂದ ಮಂದಿರ ಲೋಕಾರ್ಪಣೆ

ನವದೆಹಲಿ: ಅಬುಧಾಬಿಯಲ್ಲಿ ನಿರ್ಮಾಣದವಾದ ಮೊದಲ ಹಿಂದೂ ದೇವಾಲಯ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಫೆಬ್ರವರಿ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ಸ್ವಾಮಿ ನಾರಾಯಣ ಮಂದಿರವನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ.

ಈ ಬಗ್ಗೆ ಸ್ವಾಮಿ ನಾರಾಯಣ ಸಂಸ್ಥೆಯ (ಬಿಎಪಿಎಸ್) ಅಧಿಕೃತ ಪತ್ರಿಕಾ ಪ್ರ ಕಟಣೆ ತಿಳಿಸಿದ್ದು , ಈ ದೇವಾಲಯ ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ. ಅಬುಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ಈ ದೇವಾಲಯ ತಲೆ ಎತ್ತಿದೆ. ಉದ್ಘಾ ಟನೆ ಹಿನ್ನೆಲೆ ಬಿಎಪಿಎಸ್ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರುಯುಎಇಗೆ ಆಗಮಿಸಿದ್ದಾರೆ. ಈ ಮಂದಿರದ ಉದ್ಘಾ ಟನೆಯನ್ನು ‘ಸೌಹಾರ್ದತೆಯ ಹಬ್ಬ ’ದಂತೆ ಆಚರಿಸಲಾಗುತ್ತದೆ. ಜನರ ನಡುವೆ ಸಾಮರಸ್ಯ ವನ್ನು ಬೆಳೆಸುವುದು ಈ ಉದ್ಘಾ ಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾ ಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರ ಕಟಣೆಯಲ್ಲಿ ತಿಳಿಸಿದೆ.

2019 ರ ಡಿಸೆಂಬರ್‌ನಲ್ಲಿ 27 ಎಕರೆ ಭೂಮಿಯಲ್ಲಿ ಮಂದಿರದ ನಿರ್ಮಾಣ ಪ್ರಾರಂಭವಾಗಿದ್ದು ಇದು ಸೈಟ್ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯಿಂದ ಅಲ್ ರಹ್ಬಾ ಬಳಿ ಇರುವ ಅಬು ಮುರೇಖಾಹ್ ನಲ್ಲಿದೆ

ಇದರ ನಿರ್ಮಾಣಕ್ಕಾಗಿ, ಉತ್ತರ ರಾಜಸ್ಥಾನದಿಂದ ಅಬುಧಾಬಿಗೆ ಟನ್ಗಳಷ್ಟು ಗುಲಾಬಿ ಮರಳುಗಲ್ಲುಗಳನ್ನು ಕಳುಹಿಸಲಾಗಿತ್ತು. ಉತ್ತರ ಭಾರತದ ರಾಜ್ಯದಿಂದ ಬಾಳಿಕೆ ಬರುವ ಕಲ್ಲುಗಳನ್ನು 50 °C (122 °F) ವರೆಗಿನ ಸುಡುವ ಬೇಸಿಗೆಯ ತಾಪಮಾನವನ್ನು ತಡೆದುಕೊಳ್ಳುವ ಸಾಮರ್ಥ್ಯಕ್ಕಾಗಿ ಆಯ್ಕೆಮಾಡಲಾಗಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 hour ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

3 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

4 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

4 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

4 hours ago