Featured

ಉದ್ಧವ್‌ ಠಾಕ್ರೆಗೆ ಶುಭ ಹಾರೈಸಿದ ರಾಹುಲ್ !!.. ಶಿವಸೇನೆಗೆ ಹತ್ತಿರವಾಗ್ತಾರಾ ರಾಹುಲ್​?

ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.

ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಶುಕ್ರವಾರ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.

ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್‌, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್‌ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಉದ್ಧವ್​ ಠಾಕ್ರೆ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭ ಕೋರಿದ್ದಾರೆ. ಆದರೆ ಎಲ್ಲರ ಶುಭಾಶಯಗಳ ನಡುವೆ ರಾಹುಲ್​ ಗಾಂಧಿ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಮಾಡಿರುವ ಬಹಿರಂಗ ಶುಭಾಶಯ ವಿನಿಮಯ ರಾಜಕೀಯದಲ್ಲಿ ಸಂಚಲನ ಮೂಡಿಸ್ತಿದೆ. ಇನ್ನು ಇತ್ತೀಚಗಷ್ಟೆ  ಸಂಸತ್​ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣ ಹಾಗೂ ಮೋದಿಗೆ ನೀಡಿದ ಅಪ್ಪುಗೆಯ ಬಗ್ಗೆ ಶಿವಸೇನೆ ತನ್ನದೇ ಸ್ಟೈಲ್​ನಲ್ಲಿ ಶ್ಲಾಘನೆ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಹುಲ್​ ಗಾಂಧಿ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳಿರುವುದು ಬಿಜೆಪಿ ಪಾಳಯದಲ್ಲಿ ಮತ್ತಷ್ಟು ಆತಂಕಕ್ಕೂ ಕಾರಣವಾಗಿದೆ ಎನ್ನಲಾಗಿದೆ.
ನಿಗೂಢ ನಡೆ: ಬಿಜೆಪಿ ಜತೆ ಶಿವಸೇನೆಯ ಸಂಬಂಧ ಮುರಿದು ಬೀಳುವ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ನಾಯಕನ ನಡೆ ಕುತೂಹಲ ಮೂಡಿಸಿದೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago