Featured

ಉದ್ಧವ್‌ ಠಾಕ್ರೆಗೆ ಶುಭ ಹಾರೈಸಿದ ರಾಹುಲ್ !!.. ಶಿವಸೇನೆಗೆ ಹತ್ತಿರವಾಗ್ತಾರಾ ರಾಹುಲ್​?

ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು ಲೋಕಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ.

ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ 58ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಶುಕ್ರವಾರ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ. ಇದು ರಾಜಕೀಯ ವಲಯ ಹುಬ್ಬೇರಿಸುವಂತೆ ಮಾಡಿದೆ.

ಲೋಕಸಭೆಯಲ್ಲಿ ಪ್ರಧಾನಿಯನ್ನು ಆಲಿಂಗಿಸಿಕೊಂಡ ಕೆಲ ದಿನಗಳಲ್ಲೇ ರಾಹುಲ್‌, ಇದೇ ಮೊದಲ ಬಾರಿ ಠಾಕ್ರೆ ಅವರಿಗೆ ಶುಭ ಕೋರಿದ್ದಾರೆ. ವೈಯಕ್ತಿಕ ಸಂಬಂಧ ಗಳಿಸಲು ರಾಹುಲ್‌ ರಾಜಕೀಯ ವೈರತ್ವವನ್ನು ಮೀರಬಲ್ಲರು ಎಂಬುದನ್ನು ಸಹ ಇದು ಸಂಕೇತಿಸುತ್ತದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಉದ್ಧವ್​ ಠಾಕ್ರೆ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಶುಭ ಕೋರಿದ್ದಾರೆ. ಆದರೆ ಎಲ್ಲರ ಶುಭಾಶಯಗಳ ನಡುವೆ ರಾಹುಲ್​ ಗಾಂಧಿ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಮಾಡಿರುವ ಬಹಿರಂಗ ಶುಭಾಶಯ ವಿನಿಮಯ ರಾಜಕೀಯದಲ್ಲಿ ಸಂಚಲನ ಮೂಡಿಸ್ತಿದೆ. ಇನ್ನು ಇತ್ತೀಚಗಷ್ಟೆ  ಸಂಸತ್​ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣ ಹಾಗೂ ಮೋದಿಗೆ ನೀಡಿದ ಅಪ್ಪುಗೆಯ ಬಗ್ಗೆ ಶಿವಸೇನೆ ತನ್ನದೇ ಸ್ಟೈಲ್​ನಲ್ಲಿ ಶ್ಲಾಘನೆ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಹುಲ್​ ಗಾಂಧಿ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳಿರುವುದು ಬಿಜೆಪಿ ಪಾಳಯದಲ್ಲಿ ಮತ್ತಷ್ಟು ಆತಂಕಕ್ಕೂ ಕಾರಣವಾಗಿದೆ ಎನ್ನಲಾಗಿದೆ.
ನಿಗೂಢ ನಡೆ: ಬಿಜೆಪಿ ಜತೆ ಶಿವಸೇನೆಯ ಸಂಬಂಧ ಮುರಿದು ಬೀಳುವ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ ನಾಯಕನ ನಡೆ ಕುತೂಹಲ ಮೂಡಿಸಿದೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

25 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

29 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

45 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

1 hour ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago