Featured

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ FIR – Vishwanews24

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಉದ್ಯಮಿ ಪ್ರದೀಪ್ ಡೆತ್ ನೋಟ್‌ನಲ್ಲಿ  ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯೇನು?: ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೇ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್‌ಗೆ ವಾಪಸ್ ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ರೂ. ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು.

ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹೀಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಮೃತ ಉದ್ಯಮಿ ಪತ್ನಿ ನಮಿತಾ ದೂರಿನನ್ವಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಈ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳೆಲ್ಲರಿಗೂ ನೋಟಿಸ್ ನೀಡಿ ಪೊಲೀಸರು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago