ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.
ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…