ಬೆಂಗಳೂರು: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.
ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…