Featured

ಉದ್ಯಮಿ ಸಿದ್ಧಾರ್ಥ್ ಗೆ ಆದ ಪರಿಸ್ಥಿತಿ ನನಗೂ ಆಗುತ್ತಿದೆ : ವಿಜಯ್ ಮಲ್ಯ -Vishwanews24

ಲಂಡನ್: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪರಿಸ್ಥಿತಿಗೂ, ನನಗೂ ವ್ಯತ್ಯಾಸವಿಲ್ಲ. ನನ್ನ ಸ್ಥಿತಿಯೂ ಸಿದ್ಧಾರ್ಥ್ ಅವರ ಸ್ಥಿತಿಯಂತೆ ಇದೆ, ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ, ವಿದೇಶದಕ್ಕೆ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಸಿದ್ಧಾರ್ಥ್ ಸಾವಿನ ಕುರಿತು ಟ್ವಿಟ್ ಮಾಡಿದ್ದು, ಪರೋಕ್ಷವಾಗಿ ನಾನು ಕೂಡ ಸಿದ್ಧಾರ್ಥ ಅವರ ಸಾಲಿಗೆ ಸೇರುತ್ತೇನೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ಮರುಪಾವತಿ ಮಾಡದೇ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ಧಾರ್ಥ ಉತ್ತಮ ಮನುಷ್ಯ ಮತ್ತು ಬುದ್ಧಿವಂತ ಉದ್ಯಮಿಯಾಗಿದ್ದರು. ಅವರ ಪತ್ರವನ್ನು ನೋಡಿ ನನಗೆ ಆಘಾತವಾಗಿದೆ.ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಯಾರನ್ನಾದರೂ ಹತಾಶೆಗೆ ದೂಡಬಹುದು. ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದಿದ್ದರು ಕೂಡ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ಮತ್ತು ಪಟ್ಟುಹಿಡಿದ ವರ್ತನೆಯಾಗಿದೆ ಎಂದು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್​ಗಳ ವಿರುದ್ಧ ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ‘ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ ​ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ ​ಗಳು ತಡೆಗೋಡೆಯಾಗಿ ನಿಂತಿವೆ ಎಂದು ಮಲ್ಯ ಟ್ವೀಟ್​ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago