ಲಂಡನ್: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪರಿಸ್ಥಿತಿಗೂ, ನನಗೂ ವ್ಯತ್ಯಾಸವಿಲ್ಲ. ನನ್ನ ಸ್ಥಿತಿಯೂ ಸಿದ್ಧಾರ್ಥ್ ಅವರ ಸ್ಥಿತಿಯಂತೆ ಇದೆ, ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ, ವಿದೇಶದಕ್ಕೆ ಪರಾರಿಯಾಗಿರುವ ಮಧ್ಯದ ದೊರೆ ವಿಜಯ್ ಮಲ್ಯ ಸಿದ್ಧಾರ್ಥ್ ಸಾವಿನ ಕುರಿತು ಟ್ವಿಟ್ ಮಾಡಿದ್ದು, ಪರೋಕ್ಷವಾಗಿ ನಾನು ಕೂಡ ಸಿದ್ಧಾರ್ಥ ಅವರ ಸಾಲಿಗೆ ಸೇರುತ್ತೇನೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ಮರುಪಾವತಿ ಮಾಡದೇ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ಧಾರ್ಥ ಉತ್ತಮ ಮನುಷ್ಯ ಮತ್ತು ಬುದ್ಧಿವಂತ ಉದ್ಯಮಿಯಾಗಿದ್ದರು. ಅವರ ಪತ್ರವನ್ನು ನೋಡಿ ನನಗೆ ಆಘಾತವಾಗಿದೆ.ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಯಾರನ್ನಾದರೂ ಹತಾಶೆಗೆ ದೂಡಬಹುದು. ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದಿದ್ದರು ಕೂಡ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ಮತ್ತು ಪಟ್ಟುಹಿಡಿದ ವರ್ತನೆಯಾಗಿದೆ ಎಂದು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್ಗಳ ವಿರುದ್ಧ ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ‘ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ ಗಳು ತಡೆಗೋಡೆಯಾಗಿ ನಿಂತಿವೆ ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…