Featured

ಉದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ : ಸಿ ಎಂ. ಬೊಮ್ಮಾಯಿ ಭರವಸೆ  – Vishwanews24

ಉದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ : ಸಿ ಎಂ. ಬೊಮ್ಮಾಯಿ ಭರವಸೆ  – Vishwanews24

ಬೆಂಗಳೂರು: ಉದ್ಯಮ ಕ್ಷೇತ್ರದಲ್ಲಿ ಹೊಸ ಪ್ರಯೋಗ ಮಾಡಿ ಎಂದು ರಾಜ್ಯಕ್ಕೆ ನವೋದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ 24 ನೇ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಅವರು, ಉದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಭರವಸೆ ನೀಡಿದರು.

ಬಿಟಿಎಸ್ 2021 ಕಾರ್ಯಕ್ರಮದಲ್ಲಿ ಭವಿಷ್ಯದ ಸ್ಟೇಸ್ ಕ್ರಾಫ್ಟ್‌ನಲ್ಲಿ ಕುಳಿತು ಪ್ರಯಾಣ ಮಾಡಿದ ಅನುಭವಾಗುತ್ತಿದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮ ಕ್ಷೇತ್ರದಲ್ಲಿ ಹೊಸತನದ ಪ್ರಯೋಗ ಮಾಡುವ ನಿಟ್ಟಿನಲ್ಲಿ ನವೋದ್ಯಮಿಗೆ ರಾಜ್ಯಕ್ಕೆ ಆಹ್ವಾನ ನೀಡಿದರು.

ಬೆಂಗಳೂರು ಟೆಕ್ ಸಮಿಟ್ ಯಶಸ್ವಿಯಾಗಲಿದೆ. ತಂತ್ರಜ್ಞಾನ ವಿಸ್ತರಣೆಗೆ ಇದು ಅನುಕೂಲ ಕಲ್ಪಿಸಲಿದೆ. ಕರ್ನಾಟಕ ತಂತ್ರಜ್ಞಾನದಲ್ಲಿ ನಾಯಕತ್ವ ವಹಿಸಿಕೊಂಡಿರುವ ರಾಜ್ಯವಾಗಿದೆ. ಉನ್ನತ ಮಟ್ಟದ ಚಿಂತನೆ ಮಾಡುವ ಉದ್ಯಮಿಗಳಿದ್ದಾರೆ.‌

ಮಾನಸ ಸರೋವರದಲ್ಲಿ ಹದ್ದುಗಳಿಲ್ಲ ಬದಲಾಗಿ ಹಂಸಗಳಿವೆ. ಬೆಂಗಳೂರು ಮಾನಸ ಸರೋವರಕ್ಕೆ ಕರೆದೊಯ್ಯುವ ಸರಸ್ವತಿಯ ವಾಹನ ಹಂಸ ಇದ್ದಂತೆ ಎಂದು ರೂಪಕದ ಮೂಲಕ ನವೋದ್ಯಮ ಕ್ಷೇತ್ರಕ್ಕೆ ಆದ್ಯತೆ ನೀಡಲಿದೆ ಎಂದರು.

ರಾಜ್ಯದ ನೀತಿಗಳು ದೂರದೃಷ್ಟಿ ಉಳ್ಳವುಗಳಾಗಿವೆ. ಕರ್ನಾಟಕವನ್ನು ತಂತ್ರಜ್ಞಾನದಲ್ಲಿ ನಾಯಕ ರಾಜ್ಯ ಅನ್ನಬಹುದು. ಯಾಕಂದ್ರೆ ನಾಯಕತ್ವ ವಹಿಸುವ ಉದ್ಯಮಿಗಳನ್ನು ನಾವು ಹೊಂದಿದ್ದೇವೆ. ಕಿರಣ್ ಮುಜುಂದಾರ್ ಷಾ, ಕ್ರಿಶ್ ಗೋಪಾಲಕೃಷ್ಣ ಥರದ ಹಲವು ತಂತ್ರಜ್ಞಾನ ಸಾಧಕರು ನಮ್ಮಲ್ಲಿದ್ದಾರೆ.

ಇವತ್ತು ಜಗತ್ತು ತಂತ್ರಜ್ಞಾನದಲ್ಲಿ ಬಹಳ ಮುಂದುವರೆದಿದೆ. ಈ ವಲಯದಲ್ಲಿ ಮಹತ್ತರ ಬದಲಾವಣೆಗಳು ಇನ್ನೂ ಮುಂದಿವೆ. ಯಾವುದೇ ಆವಿಷ್ಕಾರಗಳು ಒಬ್ಬ ಮನುಷ್ಯನಿಂದಲೇ ಆರಂಭವಾಗುವುದು. ನಂತರ ಆ ಆವಿಷ್ಕಾರ ಜಗತ್ತಿಗೆ ನೆರವಾಗುತ್ತದೆ, ಜಗತ್ತು ಬಳಸುತ್ತದೆ. ನಮ್ಮ ರಾಜ್ಯದಲ್ಲಿ ಬೆಂಗಳೂರು ತಂತ್ರಜ್ಞಾನದ ಹಬ್ ಆಗಿದೆ. ಇಲ್ಲಿ ಅಂಥ ಆವಿಷ್ಕಾರ ಮಾಡುವ ಮಾನವ ಸಂಪನ್ಮೂಲ ಇದೆ. ಬೆಂಗಳೂರು ಟೆಕ್ ಸಮಿಟ್ ಯಶಸ್ವಿ ಸಮಿಟ್. ಇದನ್ನು ಇನ್ನಷ್ಟು ಯಶಸ್ಸಾಗುವಂತೆ ಮಾಡುವ ಗುರಿ ಹೊಂದಿದ್ದೇವೆ ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಐಟಿ ಬಿಟಿ ಸಚಿವ ಅಶ್ವತ್ಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಶ್ ಗೋಪಾಲಕೃಷ್ಣನ್, ಬಿಟಿ ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ – vishwanews24

 ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ      ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…

22 minutes ago

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ   ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…

25 minutes ago

ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ – vishwanews24

 ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ   ಉಡುಪಿ : ನೇಪಾಳ ಮತ್ತು…

28 minutes ago

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

19 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

19 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

19 hours ago