ಬೆಂಗಳೂರು: ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು ,ಸ್ಥಳೀಯವಾಗಿರುವ ಕೈಗಾರಿಕೆ, ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇಕಡವಾರು ಉದ್ಯೋಗ ಕಡ್ಡಾಯವಾಗಿ ನೀಡುವಂತಾಗಲು ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಿಸಲು ಸರಕಾರ ಮುಂದಾಗಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.
ಶೇ. 50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಈ ನಿಯಮ ಜಾರಿಯಾಗಬೇಕಿದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ. 100, ಬಿ ಗ್ರೂಪ್ ಗೆ ಶೇ. 85, ಎ ಗ್ರೂಪ್ ಗೆ ಶೇ. 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ವರದಿ ಅನುಷ್ಠಾನಿಸಲು ಅವಕಾಶ ನೀಡಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿ ಈ ಬಗ್ಗೆ 2019ರಲ್ಲಿ ತಿದ್ದುಪಡಿ ಮಾಡಲಾಗಿದೆ.
ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24
ಆದರೆ, ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಸರಕಾರ ಮಾಡಬೇಕೆಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಒತ್ತಾಯಿಸಿದರು. ಇದಕ್ಕುತ್ತರಿಸಿದ ಕಾರ್ಮಿಕ ಸಚಿವ ಹೆಬ್ಬಾರ್, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…