ಉಡುಪಿ

ಉದ್ಯಾವರ :ಚರಂಡಿಗೆ ಬಿದ್ದ ಸಕ್ಕರೆ ಸಾಗಣೆ ಲಾರಿ; ಮದ್ಯದ ಅಮಲಿನಲ್ಲಿದ್ದ ಚಾಲಕ ವಶಕ್ಕೆ – vishwanews24

ಉದ್ಯಾವರ :ಚರಂಡಿಗೆ ಬಿದ್ದ ಸಕ್ಕರೆ ಸಾಗಣೆ ಲಾರಿ; ಮದ್ಯದ ಅಮಲಿನಲ್ಲಿದ್ದ ಚಾಲಕ ವಶಕ್ಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ–66ರ ಉದ್ಯಾವರ ಸಮೀಪ ಸಕ್ಕರೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಕಂಡುಬಂದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯನ್ನು ಉದ್ಯಾವರ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಲು ಚಾಲಕ ಯತ್ನಿಸಿದ್ದಾನೆ. ಆದರೆ ಕಂಠಪೂರ್ತಿ ಕುಡಿದಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಚರಂಡಿಗೆ ನುಗ್ಗಿದೆ. ಲಾರಿಯ ಚಕ್ರ ಮಣ್ಣಿನಲ್ಲಿ ಹೂತುಹೋಗಿದ್ದರಿಂದ ಲಾರಿ ಮುಂದೆ ಚಲಿಸದೇ ನಿಂತಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಅವಘಡ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕಾಪು ಪೊಲೀಸರು ಪರಿಶೀಲನೆ ನಡೆಸಿದರು. ಲಾರಿ ಚಾಲಕ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಆತನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Vishwa News 24

Recent Posts

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…

15 minutes ago

ಯಾವುದೇ ಅಡ್ಡಿ ಆತಂಕಗಳು ಎದುರಾಗದೆ ಮೀನುಗಾರಿಕೆ ಸುಗಮವಾಗಲಿ : ಗಂಗೊಳ್ಳಿಯಲ್ಲಿ ಸಮುದ್ರ ಪೂಜೆ – vishwanews24

ಗಂಗೊಳ್ಳಿ: ಮತ್ಸ್ಯಕ್ಷಾಮ ಬಾರದೆ, ಯಾವುದೇ ಅಡ್ಡಿ ಆತಂಕಗಳು ಎದುರಾಗದೆ ಮೀನುಗಾರಿಕೆ ಸುಗಮವಾಗಲಿ : ಮೀನುಗಾರರಿಂದ ಸಮುದ್ರರಾಜನಿಗೆ ವಿಶೇಷ ಪೂಜೆ ಉಡುಪಿ:…

26 minutes ago

ಉಡುಪಿ: ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲು ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)…

35 minutes ago

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ – vishwanews24

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ಗೆ…

48 minutes ago

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಚಿವರಿಗೆ ನಿಯೋಗದಿಂದ ಮನವಿ – vishwanews24

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಚಿವರಿಗೆ ನಿಯೋಗದಿಂದ ಮನವಿ ಬೆಂಗಳೂರು: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ…

2 hours ago

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ – vishwanews24

ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…

2 hours ago