ಉಡುಪಿ : ಒಂದು ಕಾಲದಲ್ಲಿ ಆ ಗ್ರಾಮದ ಜನರ ಉದ್ಯಾವರ ಪೇಟೆಗೆ ಬರಬೇಕಾದರೇ ದೋಣಿ ಬಿಟ್ಟರೆ ಬೇರೆ ಯಾವುದೇ ವ್ಯವಸ್ಥೆಯೇ ಇಲ್ಲದ ಸಮಯ , ವೈದ್ಯಕೀಯ ಸಮಸ್ಯೆಯಂತೂ ಹೇಳತೀರದ ಕಷ್ಟ, ಮಳೆಗಾಲ ಬಂದರೆ ಸಾಕು ಈ ಭಾಗದ ನಿವಾಸಿಗಳಿಗೆ ಪ್ರವಾಹ ಕಟ್ಟಿಟ್ಟ ಬುತ್ತಿ ಇಂತಹ ಸಮಯದಲ್ಲಿ ಆ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿದ್ದು ಅಂದಿನ ಶಾಸಕ ವಿನಯ ಕುಮಾರ್ ಸೊರಕೆ.
ಹೌದು ವಿನಯ್ ಕುಮಾರ್ ಸೊರಕೆಯವರಿಗೆ ಜಾರುಕುದ್ರುವಿನ ಸಮಸ್ಯೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ವಾಸವಾಗಿರುವ ಜನರ ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿಕೊಂಡು ಕೂಡಲೇ ಜಾರುಕುದ್ರುವಿಗೆ ಸಂಪರ್ಕ ಸೇತುವೆ ನಿರ್ಮಾಣ ಮಾಡಲು ಅನುದಾನ ಒದಗಿಸಿ, ಸೇತುವೆ ಕಾಮಗಾರಿ ಚುರುಕು ಗೊಳಿಸಿದ್ದರು ಸದ್ಯ ಸೇತುವೆ ನಿರ್ಮಾಣ ಕಾರ್ಯ ಕೆಲವು ಸಮಯದ ಹಿಂದೆಯಷ್ಟೆ ಪೂರ್ಣಗೊಂಡಿತ್ತು.
ಸದ್ಯ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಯಿತು ಮತ್ತು ಉಪಕಾರ ಮಾಡಿದ ಮಾಜಿ ಸಚಿವರನ್ನು ಗೌರವಿಸಬೇಕೆನ್ನುವ ಇರಾದೆಯಿಂದ ಸೆಪ್ಟಂಬರ್ 9 ಶುಕ್ರವಾರದಂದು ಖಾಸಾಗಿ ಕಾರ್ಯಕ್ರಮದ ನಿಮಿತ್ತ ಜಾರುಕುದ್ರು ಕಡೆ ತೆರಳುತ್ತಿರುವ ಸಮಯಲ್ಲಿ ವಿನಯ್ ಕುಮಾರ್ ಸೊರಕೆಯವರನ್ನು ಆ ಭಾಗದ ಜನರು ಎದುರುಗೊಂಡು ಅತ್ಯಂತ ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಿದರು.
ಹಲವು ಕಾಲದಿಂದ ಕನಸಾಗಿಯೇ ಉಳಿದಿದ್ದ ಈ ಭಾಗದ ಸಾರ್ವಜನಿಕ ಸಮಸ್ಯೆಗೆ ಮುಕ್ತಿ ನೀಡಿದ ಕೀರ್ತಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಸಲ್ಲಬೇಕಾಗಿದೆ ಎಂದು ಸಾರ್ವಜನಿಕರು ಹೇಳಿಕೊಂಡರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಅವಧಿಯಲ್ಲಿ ಇಂತಹ ನೂರಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವುದು ಗಮನಾರ್ಹವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…