Featured

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು:vishwanews24

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ

ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು : vishwanews24

ಉಡುಪಿ : ಒಂದು ಕಾಲದಲ್ಲಿ ಆ ಗ್ರಾಮದ ಜನರ ಉದ್ಯಾವರ ಪೇಟೆಗೆ ಬರಬೇಕಾದರೇ ದೋಣಿ ಬಿಟ್ಟರೆ ಬೇರೆ ಯಾವುದೇ ವ್ಯವಸ್ಥೆಯೇ ಇಲ್ಲದ ಸಮಯ , ವೈದ್ಯಕೀಯ ಸಮಸ್ಯೆಯಂತೂ ಹೇಳತೀರದ ಕಷ್ಟ, ಮಳೆಗಾಲ ಬಂದರೆ ಸಾಕು ಈ ಭಾಗದ ನಿವಾಸಿಗಳಿಗೆ ಪ್ರವಾಹ ಕಟ್ಟಿಟ್ಟ ಬುತ್ತಿ ಇಂತಹ ಸಮಯದಲ್ಲಿ ಆ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿದ್ದು ಅಂದಿನ ಶಾಸಕ ವಿನಯ ಕುಮಾರ್ ಸೊರಕೆ.


ಹೌದು ವಿನಯ್ ಕುಮಾರ್ ಸೊರಕೆಯವರಿಗೆ ಜಾರುಕುದ್ರುವಿನ ಸಮಸ್ಯೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ವಾಸವಾಗಿರುವ ಜನರ ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿಕೊಂಡು ಕೂಡಲೇ ಜಾರುಕುದ್ರುವಿಗೆ ಸಂಪರ್ಕ ಸೇತುವೆ ನಿರ್ಮಾಣ ಮಾಡಲು ಅನುದಾನ ಒದಗಿಸಿ, ಸೇತುವೆ ಕಾಮಗಾರಿ ಚುರುಕು ಗೊಳಿಸಿದ್ದರು ಸದ್ಯ ಸೇತುವೆ ನಿರ್ಮಾಣ ಕಾರ್ಯ ಕೆಲವು ಸಮಯದ ಹಿಂದೆಯಷ್ಟೆ ಪೂರ್ಣಗೊಂಡಿತ್ತು.


ಸದ್ಯ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಯಿತು ಮತ್ತು ಉಪಕಾರ ಮಾಡಿದ ಮಾಜಿ ಸಚಿವರನ್ನು ಗೌರವಿಸಬೇಕೆನ್ನುವ ಇರಾದೆಯಿಂದ ಸೆಪ್ಟಂಬರ್ 9 ಶುಕ್ರವಾರದಂದು ಖಾಸಾಗಿ ಕಾರ್ಯಕ್ರಮದ ನಿಮಿತ್ತ ಜಾರುಕುದ್ರು ಕಡೆ ತೆರಳುತ್ತಿರುವ ಸಮಯಲ್ಲಿ ವಿನಯ್ ಕುಮಾರ್ ಸೊರಕೆಯವರನ್ನು ಆ ಭಾಗದ ಜನರು ಎದುರುಗೊಂಡು ಅತ್ಯಂತ ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಿದರು.


ಹಲವು ಕಾಲದಿಂದ ಕನಸಾಗಿಯೇ ಉಳಿದಿದ್ದ ಈ ಭಾಗದ ಸಾರ್ವಜನಿಕ ಸಮಸ್ಯೆಗೆ ಮುಕ್ತಿ ನೀಡಿದ ಕೀರ್ತಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಸಲ್ಲಬೇಕಾಗಿದೆ ಎಂದು ಸಾರ್ವಜನಿಕರು ಹೇಳಿಕೊಂಡರು.


                                                 ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಅವಧಿಯಲ್ಲಿ ಇಂತಹ ನೂರಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವುದು ಗಮನಾರ್ಹವಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

10 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

11 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago