Featured

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ – vishwanews24

ಉದ್ಯಾವರ: ಫುಡ್ ಡೆಲಿವರಿಗೆ ಬಂದಿದ್ದ ಯುವಕನ ಮೇಲೆ ಬೀದಿ ನಾಯಿಗಳ ದಾಳಿ

ಉಡುಪಿ: ಜಿಲ್ಲೆಯ ಉದ್ಯಾವರದಲ್ಲಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್ ಮೇಲೆ ಬೀದಿ ನಾಯಿಗಳ ದಂಡು ದಾಳಿ ಮಾಡಿದ ಘಟನೆಯು ನಡೆದಿದೆ. ಈ ಭಾಗದ ಮನೆಯೊಂದಕ್ಕೆ ಫುಡ್ ಡೆಲಿವರಿ ಮಾಡಿ ಹಿಂತಿರುಗುತ್ತಿದ್ದ ವೇಳೆ ಬೀದಿ ನಾಯಿಗಳ ದಂಡು ಹಿಂಬಾಲಿಸಿಕೊಂಡು ಬಂದಿದ್ದು, ತನ್ನ ಬೈಕ್ ನ್ನು ನಿಧಾನಗೊಳಿಸಿದ ವೇಳೆಯಲ್ಲಿ ಈತನ ಕಾಲಿಗೆ 3-4 ನಾಯಿಗಳು ಕಚ್ಚಿವೆ.

ಈ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ಸಮೇತ ಯುವಕ ರಸ್ತೆಗೆ ಬಿದ್ದಿದ್ದು ಯುವಕ ಗಾಯಗೊಂಡಿರುತ್ತಾರೆ. ಈತ ಬಿದ್ದಲ್ಲಿ ಈತನ ಮೇಲೆ ಮತ್ತೆ ಬೀದಿ ನಾಯಿಗಳು ದಾಳಿಗೆ ಯತ್ನಿಸಿದ್ದು, ಈ ವೇಳೆ ಈತನ ಬೊಬ್ಬೆ ಮತ್ತು ನಾಯಿಗಳ ಬೊಬ್ಬೆಗೆ ಒಟ್ಟಾದ ಸ್ಥಳೀಯ ಮಹಿಳೆಯರು ಬೀದಿ ನಾಯಿಗಳನ್ನು ಗದರಿಸಿ ಓಡಿಸಿದ್ದರಿಂದ ಮತ್ತಷ್ಟು ನಾಯಿ ಕಡಿತದ ಅಪಾಯದಿಂದ ಯುವಕ ಪಾರಾಗಿದ್ದಾನೆ. ಅದೃಷ್ಟವಶಾತ್ ನಾಯಿಗಳು ಈತ ಧರಿಸಿದ್ದ ಶೂ ಗೆ ಕಚ್ಚಿದ್ದರಿಂದ ನಾಯಿ ಕಡಿತದ ಬಹಳ ಗಾಯವಾಗಿಲ್ಲ. ಶೂ ನಾಯಿ ಕಡಿತದಿಂದ ಹರಿದುಹೋಗಿದೆ.

ಸಮಾಜ ಸೇವಕರ ಸಹಕಾರದಿಂದ ರಿಕ್ಷಾದ ಮೂಲಕ ಗಾಯಾಳುವನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವಲ್ಲಿ ಸಹಕರಿಸಿದ್ದಾರೆ. ಬೀದಿ ನಾಯಿಯ ದಾಳಿಯ ಘಟನೆಯು ಉದ್ಯಾವರ ಭಾಗದಲ್ಲಿ ಆಗಾಗ್ಗೆ ಸಂಭವಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಾಡಲು ಅಂಗನವಾಡಿಗೆ ತೆರಳುತ್ತಿದ್ದ ಬಾಲಕಿ ಗೆ ಬೀದಿ ನಾಯಿ ಕಚ್ಚಿತ್ತು. ಗಂಭೀರ ವಿಷಯದ ಬಗ್ಗೆ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರ ರಕ್ಷಣೆಗೆ ಮುಂದಾಗುವಂತೆ ಆಗ್ರಹಿಸುತ್ತಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago