ಉಡುಪಿ: ಜಿಲ್ಲೆಯ ಉದ್ಯಾವರದಲ್ಲಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್ ಮೇಲೆ ಬೀದಿ ನಾಯಿಗಳ ದಂಡು ದಾಳಿ ಮಾಡಿದ ಘಟನೆಯು ನಡೆದಿದೆ. ಈ ಭಾಗದ ಮನೆಯೊಂದಕ್ಕೆ ಫುಡ್ ಡೆಲಿವರಿ ಮಾಡಿ ಹಿಂತಿರುಗುತ್ತಿದ್ದ ವೇಳೆ ಬೀದಿ ನಾಯಿಗಳ ದಂಡು ಹಿಂಬಾಲಿಸಿಕೊಂಡು ಬಂದಿದ್ದು, ತನ್ನ ಬೈಕ್ ನ್ನು ನಿಧಾನಗೊಳಿಸಿದ ವೇಳೆಯಲ್ಲಿ ಈತನ ಕಾಲಿಗೆ 3-4 ನಾಯಿಗಳು ಕಚ್ಚಿವೆ.
ಈ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ಸಮೇತ ಯುವಕ ರಸ್ತೆಗೆ ಬಿದ್ದಿದ್ದು ಯುವಕ ಗಾಯಗೊಂಡಿರುತ್ತಾರೆ. ಈತ ಬಿದ್ದಲ್ಲಿ ಈತನ ಮೇಲೆ ಮತ್ತೆ ಬೀದಿ ನಾಯಿಗಳು ದಾಳಿಗೆ ಯತ್ನಿಸಿದ್ದು, ಈ ವೇಳೆ ಈತನ ಬೊಬ್ಬೆ ಮತ್ತು ನಾಯಿಗಳ ಬೊಬ್ಬೆಗೆ ಒಟ್ಟಾದ ಸ್ಥಳೀಯ ಮಹಿಳೆಯರು ಬೀದಿ ನಾಯಿಗಳನ್ನು ಗದರಿಸಿ ಓಡಿಸಿದ್ದರಿಂದ ಮತ್ತಷ್ಟು ನಾಯಿ ಕಡಿತದ ಅಪಾಯದಿಂದ ಯುವಕ ಪಾರಾಗಿದ್ದಾನೆ. ಅದೃಷ್ಟವಶಾತ್ ನಾಯಿಗಳು ಈತ ಧರಿಸಿದ್ದ ಶೂ ಗೆ ಕಚ್ಚಿದ್ದರಿಂದ ನಾಯಿ ಕಡಿತದ ಬಹಳ ಗಾಯವಾಗಿಲ್ಲ. ಶೂ ನಾಯಿ ಕಡಿತದಿಂದ ಹರಿದುಹೋಗಿದೆ.
ಸಮಾಜ ಸೇವಕರ ಸಹಕಾರದಿಂದ ರಿಕ್ಷಾದ ಮೂಲಕ ಗಾಯಾಳುವನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವಲ್ಲಿ ಸಹಕರಿಸಿದ್ದಾರೆ. ಬೀದಿ ನಾಯಿಯ ದಾಳಿಯ ಘಟನೆಯು ಉದ್ಯಾವರ ಭಾಗದಲ್ಲಿ ಆಗಾಗ್ಗೆ ಸಂಭವಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಾಡಲು ಅಂಗನವಾಡಿಗೆ ತೆರಳುತ್ತಿದ್ದ ಬಾಲಕಿ ಗೆ ಬೀದಿ ನಾಯಿ ಕಚ್ಚಿತ್ತು. ಗಂಭೀರ ವಿಷಯದ ಬಗ್ಗೆ ಕೂಡಲೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರ ರಕ್ಷಣೆಗೆ ಮುಂದಾಗುವಂತೆ ಆಗ್ರಹಿಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…