Featured

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರವಾರ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರವಾರದ ದಿವ್ಯಾ (45) ಮೃತ ದುರ್ದೈವಿ.

ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದ ಪುತ್ರಿಯನ್ನು ದಿವ್ಯಾ ಅವರು ಕಾರಿನಲ್ಲಿ ಕಾರವಾರಕ್ಕೆ ಕರೆದೊಯ್ಯುತ್ತಿದ್ದರು. ಸಂಜೆ ವೇಳೆ ಉಪಾಹಾರಕ್ಕಾಗಿ ಉದ್ಯಾವರ ಬಲಾಯಿಪಾದೆ ಬಳಿ ಯು-ಟರ್ನ್ ಪಡೆದು ಗುಡ್ಡೆಯಂಗಡಿಯ ಹೋಟೆಲ್‌ವೊಂದಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಪುತ್ರಿ ತನಗೆ ಕ್ರಿಕೆಟ್ ಬ್ಯಾಟ್ ಬೇಕೆಂದು ಹಠ ಹಿಡಿದಿದ್ದಾಳೆ ಎನ್ನಲಾಗಿದೆ. ಮಗಳ ಆಸೆಯಂತೆ ಬ್ಯಾಟ್ ಕೊಡಿಸಲು ರಸ್ತೆಯ ಮತ್ತೊಂದು ಬದಿಗೆ ತೆರಳಲು ದಿವ್ಯಾ ಅವರು ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ ಕ್ರೇನ್ ಅಕಸ್ಮಾತ್ ಢಿಕ್ಕಿ ಹೊಡೆದಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ದಿವ್ಯಾ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago