ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರವಾರ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರವಾರದ ದಿವ್ಯಾ (45) ಮೃತ ದುರ್ದೈವಿ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದ ಪುತ್ರಿಯನ್ನು ದಿವ್ಯಾ ಅವರು ಕಾರಿನಲ್ಲಿ ಕಾರವಾರಕ್ಕೆ ಕರೆದೊಯ್ಯುತ್ತಿದ್ದರು. ಸಂಜೆ ವೇಳೆ ಉಪಾಹಾರಕ್ಕಾಗಿ ಉದ್ಯಾವರ ಬಲಾಯಿಪಾದೆ ಬಳಿ ಯು-ಟರ್ನ್ ಪಡೆದು ಗುಡ್ಡೆಯಂಗಡಿಯ ಹೋಟೆಲ್ವೊಂದಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಪುತ್ರಿ ತನಗೆ ಕ್ರಿಕೆಟ್ ಬ್ಯಾಟ್ ಬೇಕೆಂದು ಹಠ ಹಿಡಿದಿದ್ದಾಳೆ ಎನ್ನಲಾಗಿದೆ. ಮಗಳ ಆಸೆಯಂತೆ ಬ್ಯಾಟ್ ಕೊಡಿಸಲು ರಸ್ತೆಯ ಮತ್ತೊಂದು ಬದಿಗೆ ತೆರಳಲು ದಿವ್ಯಾ ಅವರು ಹೆದ್ದಾರಿ ದಾಟುತ್ತಿದ್ದಾಗ ವೇಗವಾಗಿ ಬಂದ ಕ್ರೇನ್ ಅಕಸ್ಮಾತ್ ಢಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಖಾಸಗಿ ವಾಹನದಲ್ಲಿ ದಿವ್ಯಾ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]