ಕಾಪು: ಉದ್ಯಾವರ ಪಾಪನಾಶಿನಿ ಹೊಳೆ ಮೇಲಿನ ರೈಲು ಹಳಿಯ ಕಂಬಗಳ ನಡುವೆ ಅಪರಿಚಿತ ಮಹಿಳೆಯೊಬ್ಬರು ರೈಲಿನಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.
ಮಹಿಳೆಯ ದೇಹವು ತೀವ್ರವಾಗಿ ನಜ್ಜುಗುಜ್ಜಾಗಿದ್ದು, ರೈಲ್ವೆ ಹಳಿಯಲ್ಲಿದ್ದ ದೊಡ್ಡ ಕಂಬದ ಮೇಲೆ ಬಿದ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಾಗರಾಜ್ ನೇತೃತ್ವದಲ್ಲಿ ಮೃತದೇಹ ಹೊರತೆಗೆಯಲಾಯಿತು. ಕಾರ್ಯಾಚರಣೆ ವೇಳೆ ಕಾಪು ಪೊಲೀಸರು ಹಾಗೂ ರೈಲ್ವೆ ಪೊಲೀಸರು ಉಪಸ್ಥಿತರಿದ್ದರು. ಬಳಿಕ ಮೃತರನ್ನು ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಯಿತು.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬಂದಿಗಳು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಉತ್ತರ ಭಾರತದ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನೈಟಿ ಹಾಕಿಕೊಂಡು ಕೊರಳಲ್ಲಿ ತಾಳಿ ಸರ ಹಾಕಿಕೊಂಡಿದ್ದರು. ಆಕೆಯ ಪರ್ಸ್ ನಲ್ಲಿ 150 ರೂಪಾಯಿ ಇತ್ತು. ಮಾಹಿತಿ ಇದ್ದಲ್ಲಿ ಅಥವಾ ಮೃತರ ವಾರಸುದಾರರಾಗಿರುವವರು ಕಾಪು ಪೊಲೀಸ್ ಠಾಣೆ ದೂ: 0820-2551033 ಸಂಪರ್ಕಿಸಲು ಅಧಿಕಾರಿಗಳು ಕೋರಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…