ಕಾಪು: ಉದ್ಯಾವರ ಪಾಪನಾಶಿನಿ ಹೊಳೆ ಮೇಲಿನ ರೈಲು ಹಳಿಯ ಕಂಬಗಳ ನಡುವೆ ಅಪರಿಚಿತ ಮಹಿಳೆಯೊಬ್ಬರು ರೈಲಿನಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.
ಮಹಿಳೆಯ ದೇಹವು ತೀವ್ರವಾಗಿ ನಜ್ಜುಗುಜ್ಜಾಗಿದ್ದು, ರೈಲ್ವೆ ಹಳಿಯಲ್ಲಿದ್ದ ದೊಡ್ಡ ಕಂಬದ ಮೇಲೆ ಬಿದ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಾಗರಾಜ್ ನೇತೃತ್ವದಲ್ಲಿ ಮೃತದೇಹ ಹೊರತೆಗೆಯಲಾಯಿತು. ಕಾರ್ಯಾಚರಣೆ ವೇಳೆ ಕಾಪು ಪೊಲೀಸರು ಹಾಗೂ ರೈಲ್ವೆ ಪೊಲೀಸರು ಉಪಸ್ಥಿತರಿದ್ದರು. ಬಳಿಕ ಮೃತರನ್ನು ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಯಿತು.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬಂದಿಗಳು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ. ಮೃತ ಮಹಿಳೆ ಉತ್ತರ ಭಾರತದ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನೈಟಿ ಹಾಕಿಕೊಂಡು ಕೊರಳಲ್ಲಿ ತಾಳಿ ಸರ ಹಾಕಿಕೊಂಡಿದ್ದರು. ಆಕೆಯ ಪರ್ಸ್ ನಲ್ಲಿ 150 ರೂಪಾಯಿ ಇತ್ತು. ಮಾಹಿತಿ ಇದ್ದಲ್ಲಿ ಅಥವಾ ಮೃತರ ವಾರಸುದಾರರಾಗಿರುವವರು ಕಾಪು ಪೊಲೀಸ್ ಠಾಣೆ ದೂ: 0820-2551033 ಸಂಪರ್ಕಿಸಲು ಅಧಿಕಾರಿಗಳು ಕೋರಿದ್ದಾರೆ
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…