Featured

ಉದ್ಯಾವರ : ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಿರಿಯರ ದಿನ ಆಚರಣೆ -Vishwanews24

ಉದ್ಯಾವರ : ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಿರಿಯರ ದಿನ ಆಚರಣೆ -Vishwanews24

ಉದ್ಯಾವರ : ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಅಧೀನದಲ್ಲಿರುವ ಕಥೋಲಿಕ್ ಸಭಾ, ಸ್ತ್ರೀ ಸಂಘಟನೆ, ಯುವ ಮತ್ತು ಆರೋಗ್ಯ ಆಯೋಗದ ಸಹಭಾಗಿತ್ವದಲ್ಲಿ ದೇವಾಲಯದ ವ್ಯಾಪ್ತಿಯ ಹಿರಿಯರ ದಿನ ಆಚರಣೆ ಮಾಡಲಾಯಿತು.

ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಉದ್ಯಾವರ ದೇವಾಲಯದ ಪ್ರಧಾನ ಧರ್ಮಗುರು ಅತಿ ವಂ. ಫಾ. ಸ್ಟ್ಯಾನಿ ಬಿ ಲೋಬೊ ಮತ್ತು ಫಾ. ಝೇವಿಯರ್ ಪಿಂಟೊ ನೇತೃತ್ವದಲ್ಲಿ ಕೃತಜ್ಞತಾ ಬಲಿಪೂಜೆ ನಡೆಯಿತು. ಬಳಿಕ ಚರ್ಚ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ದಾಂಪತ್ಯ ಜೀವನದಲ್ಲಿ ಐವತ್ತಕ್ಕೂ ಅಧಿಕ ವರ್ಷದ ಸಂಭ್ರಮದಲ್ಲಿರುವ ಹಿರಿಯ ಜೋಡಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಾಹೆ ಮಣಿಪಾಲದ ಸ್ಟೂಡೆಂಟ್ ಕೌನ್ಸಿಲರ್ ಡಾ. ರಾಯನ್ ಮಿನೇಜಸ್ ಮಾತನಾಡುತ್ತಾ, ಪ್ರಸ್ತುತ ಕಾಲದಲ್ಲಿ ಯುವಜನರಿಗಿಂತ ಹೆಚ್ಚು ಸಮಸ್ಯೆ ಇರೋದು ಹಿರಿಯರಿಗೆ. ಹಿಂದಿನ ಕಾಲದಲ್ಲಿ ಮನೆ ತುಂಬಾ ಜನರಿದ್ದರು. ಆದರೆ ಪರಿಸ್ಥಿತಿ ಬದಲಾಗಿದೆ. ಹಲವು ಮನೆಗಳಲ್ಲಿ ಏಕಾಂಗಿ ಜೀವನ ನಡೆಸುವವರೆ ಹೆಚ್ಚು. ಇದರಿಂದಾಗಿ ಮಾನಸಿಕ ಸಂತುಲನ, ಒತ್ತಡ, ಮನಸ್ಸಿಗೆ ಏಕಾಗ್ರತೆ ಇಲ್ಲದೆ ಇರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ. ಉದ್ಯೋಗ ನಿಮಿತ್ತ ದೂರ ದೂರದ ಊರಿನಲ್ಲಿರುವ ಮಕ್ಕಳು ತಮ್ಮ ತಂದೆ ತಾಯಿಯರಿಗೆ ಒಳ್ಳೆಯ ಮೊಬೈಲ್ ಕೊಡುತ್ತಾರೆ. ಆದರೆ ದೊಡ್ಡ ದೊಡ್ಡ ಮೊಬೈಲ್ ಗಳ ಉಪಯೋಗ ಗೊತ್ತಿಲ್ಲದ ಹಿರಿಯರು ಸೈಬರ್ ಕ್ರೈಮ್ ಗೆ ಬಲಿಯಾಗುತ್ತಿದ್ದಾರೆ. ಇದು ನೋವಿನ ವಿಚಾರ. ಇದರಿಂದಾಗಿ ಹಿರಿಯರ ಮಾನಸಿಕ ಸಂತುಲನ ತಪ್ಪುತ್ತಿದೆ. ಜಿಲ್ಲೆಯಲ್ಲಿ ಅನಾಥಾಶ್ರಮಗಳು ಹೆಚ್ಚುತ್ತಿವೆ. ಮಾತ್ರವಲ್ಲದೆ ಇದ್ದ ಅನಾಥಾಶ್ರಮಗಳು ಹಿರಿಯರಿಂದ ತುಂಬುತ್ತಿದೆ. ಇದನ್ನು ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಂ. ಫಾ. ಸ್ಟ್ಯಾನಿ ಬಿ ಲೋಬೊ ಹಿರಿಯರ ದಿನದ ಸಂದೇಶವನ್ನು ನೀಡಿದರು. ವೇದಿಕೆಯಲ್ಲಿ ವಂ. ಫಾ. ಝೇವಿಯರ್ ಪಿಂಟೋ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಇದರ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಹಿರಿಯರಾದ ಜೋಸೆಫ್ ಮತ್ತು ಗ್ರೇಸಿ ಕರ್ಡೋಜಾ, ಕಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಸ್ತ್ರೀ ಸಂಘಟನೆಯ ಕಾರ್ಯದರ್ಶಿ ಐರಿನ್ ಪಿರೇರಾ, ಯುವ ಆಯೋಗದ ಸಂಚಾಲಕ ರೋಯ್ಸ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಮಾಜಿ ಅಧ್ಯಕ್ಷ ಲೋರೆನ್ಸ್ ಡೇಸಾ ಉಪಸ್ಥಿತರಿದ್ದರು.

ಆರೋಗ್ಯ ಆಯೋಗದ ಸಂಚಾಲಕ ವಿಲ್ಫ್ರೆಡ್ ಕ್ರಾಸ್ಟೋ ಸ್ವಾಗತಿಸಿದರೆ, ಕಥೋಲಿಕ್ ಸಭಾ ಕಾರ್ಯದರ್ಶಿ ಟೆರೆನ್ಸ್ ಪಿರೇರಾ ವಂದಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಹಿರಿಯರಿಗೆ ಸಹ ಭೋಜನ ವ್ಯವಸ್ಥೆ ಮಾಡಲಾಯಿತು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

11 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

17 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

19 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

19 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

19 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

19 hours ago