ಕಾಪು: ಮಕ್ಕಳ ಸ್ಕಾಲರ್ಶಿಪ್ನ ಬಗ್ಗೆ ದಾಖಲಾತಿ ಪಡೆಯಲು ಸೇವಾ ಸಿಂಧು ಕೇಂದ್ರಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ ನಿವಾಸಿ ಇಮಾಮ್ ಸಾಹೇಬ್ ಮುಲ್ಲಾ (40) ಹಲ್ಲೆಗೊಳಗಾದ ವ್ಯಕ್ತಿ. ಅವರು ಜ. 28ರಂದು ಸಂಜೆ ತನ್ನ ಪತ್ನಿ ಶೈನಾಜ್ ಬಾನು ಜತೆ ತಮ್ಮ ಮಕ್ಕಳ ಸ್ಕಾಲರ್ಶಿಪ್ ನ ಬಗ್ಗೆ ದಾಖಲಾತಿ ಪಡೆಯಲು ಉದ್ಯಾವರ ಸೇವಾ ಸಿಂಧು ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಪರಿಚಯದ ಜಾವೇದ್ ಮತ್ತು ಸಿದ್ದು ಕೂಡಾ ಅಲ್ಲಿಗೆ ಬಂದಿದ್ದ ವೇಳೆ ತಮಾಷೆಗೆಂದು ನಡೆದ ಜಗಳ ವಿಪರೀತಕ್ಕೆ ತೆರಳಿತ್ತು.
ಇಮಾಮ್ ಅವರು ಅಂಗಡಿಯ ಹೊರಗಡೆ ಬಂದಾಗ ಜಾವೆದ್ ಮತ್ತು ಸಿದ್ದು ಹೊಡೆದಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೋಳಾರಗುಡ್ಡೆ ತಲುಪಿದಾಗ ಜಾವೆದ್, ಸಿದ್ದು ಹಾಗೂ ಜಾವೇದ್ನ ಸಂಬಂಧಿಕನೋರ್ವ ಹಲ್ಲೆ ನಡೆಸಿ ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಉದ್ಯಾವರದ ಸಂಪಿಗೆ ನಗರದಲ್ಲಿರುವ ಜಾವೇದ್ ಮನೆಗೆ ವಿಷಯ ತಿಳಿಸಲು ಹೋದಾಗ ಜಾವೇದ್, ಸಲೀಂ ಹಾಗೂ ಜಾವೇದ್ನ ಸಂಬಂಧಿಕರು ಮೂವರು ಮಹಿಳೆಯರು ಮತ್ತೆ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಗಾಯಾಳು ಇಮಾಮ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…