ಕಾಪು: ಮಕ್ಕಳ ಸ್ಕಾಲರ್ಶಿಪ್ನ ಬಗ್ಗೆ ದಾಖಲಾತಿ ಪಡೆಯಲು ಸೇವಾ ಸಿಂಧು ಕೇಂದ್ರಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ ನಿವಾಸಿ ಇಮಾಮ್ ಸಾಹೇಬ್ ಮುಲ್ಲಾ (40) ಹಲ್ಲೆಗೊಳಗಾದ ವ್ಯಕ್ತಿ. ಅವರು ಜ. 28ರಂದು ಸಂಜೆ ತನ್ನ ಪತ್ನಿ ಶೈನಾಜ್ ಬಾನು ಜತೆ ತಮ್ಮ ಮಕ್ಕಳ ಸ್ಕಾಲರ್ಶಿಪ್ ನ ಬಗ್ಗೆ ದಾಖಲಾತಿ ಪಡೆಯಲು ಉದ್ಯಾವರ ಸೇವಾ ಸಿಂಧು ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಪರಿಚಯದ ಜಾವೇದ್ ಮತ್ತು ಸಿದ್ದು ಕೂಡಾ ಅಲ್ಲಿಗೆ ಬಂದಿದ್ದ ವೇಳೆ ತಮಾಷೆಗೆಂದು ನಡೆದ ಜಗಳ ವಿಪರೀತಕ್ಕೆ ತೆರಳಿತ್ತು.
ಇಮಾಮ್ ಅವರು ಅಂಗಡಿಯ ಹೊರಗಡೆ ಬಂದಾಗ ಜಾವೆದ್ ಮತ್ತು ಸಿದ್ದು ಹೊಡೆದಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೋಳಾರಗುಡ್ಡೆ ತಲುಪಿದಾಗ ಜಾವೆದ್, ಸಿದ್ದು ಹಾಗೂ ಜಾವೇದ್ನ ಸಂಬಂಧಿಕನೋರ್ವ ಹಲ್ಲೆ ನಡೆಸಿ ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಉದ್ಯಾವರದ ಸಂಪಿಗೆ ನಗರದಲ್ಲಿರುವ ಜಾವೇದ್ ಮನೆಗೆ ವಿಷಯ ತಿಳಿಸಲು ಹೋದಾಗ ಜಾವೇದ್, ಸಲೀಂ ಹಾಗೂ ಜಾವೇದ್ನ ಸಂಬಂಧಿಕರು ಮೂವರು ಮಹಿಳೆಯರು ಮತ್ತೆ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಗಾಯಾಳು ಇಮಾಮ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…